

18th May 2026

ಬಳ್ಳಾರಿ, ಮೇ.18: ಬಳ್ಳಾರಿ ತಾಲೂಕಿನ ತಗ್ಗಿನ ಬೂದಿಹಾಳ ಗ್ರಾಮದಲ್ಲಿ ಎಐಡಿಎಸ್ಓ (ಆಲ್ ಇಂಡಿಯಾ ಡೆಮೊಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್) ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ನೇತೃತ್ವದಲ್ಲಿ ನಮ್ಮ ತಗ್ಗಿನ ಬೂದಿಹಾಳ ಗ್ರಾಮದ ಶಾಲೆಯಲ್ಲಿ 120ಕ್ಕೂ ಹೆಚ್ಚಿನ ಮಕ್ಕಳು ಓದುತ್ತಿದ್ದು ಎಲ್ಲರೂ ರೈತ ಕೂಲಿ ಕಾರ್ಮಿಕರ ಮಕ್ಕಳು 5 ಕಿ.ಮೀ ದೂರವಿರುವ ಕಕ್ಕಬೇವಿನಹಳ್ಳಿ ಆರಂಭವಾಗುವ ಕೆಪಿಎಸ್ ಶಾಲೆಗೆ ಮಕ್ಕಳನ್ನು ಕಳುಹಿಸಲು ಸಾದ್ಯವಿಲ್ಲ, ನಮ್ಮ ಮಕ್ಕಳನ್ನು ಸೇರಿಸಲು ಒಪ್ಪಿಗೆ ಇರುವುದಿಲ್ಲ ಎಂದು ನಮ್ಮ ಊರಿನ ಶಾಲೆಗೆ ಸಮರ್ಪಕ ಸೌಲಭ್ಯಗಳನ್ನು ನೀಡಿ ನಮ್ಮ ಊರಿನಲ್ಲಿ ಶಾಲೆ ಉಳಿಯಬೇಕು ಎಂದು ತಗ್ಗಿನ ಬೂದಿಹಾಳ್ ಗ್ರಾಮದ ಪೋಷಕರು ಹಾಗು ಗ್ರಾಮಸ್ಥರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂದೆ ಬ್ಯಾನರ್ ಕಟ್ಟಿ, ಹೋರಾಟ ನಡೆಸಿದರು.
ನಂತರ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿಯಲ್ಲಿ ಶಾಲೆಗಳನ್ನು ವಿಲೀನಗೊಳಿಸುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ತೆಗ್ಗಿನ ಬೂದಿಹಾಳ ಗ್ರಾಮದ ಶಾಲೆಯನ್ನು ಉಳಿಸಬೇಕೆಂದು ಗ್ರಾಮ ಪಂಚಾಯಿತಿಯ ಮುಂದೆ ಪಿಡಿಓ ಮುಖಾಂತರ ಡಿಡಿಪಿಐ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಹೋರಾಟವನ್ನು ಉದ್ದೇಶಿಸಿ ಎಐಡಿಎಸ್ಓ ಜಿಲ್ಲಾ ಉಪಾಧ್ಯಕ್ಷರು ಎಂ.ಶಾಂತಿ ಅವರು ಮಾತನಾಡುತ್ತಾ... ನಮ್ಮೂರ ಶಾಲೆ ನಮ್ಮ ಊರಿನಲ್ಲಿ ಉಳಿಯಬೇಕು ಮತ್ತು ಕೆಪಿಎಸ್ ಯೋಜನೆ ರದ್ದಾಗಬೇಕೆಂದು ಆಗ್ರಹಿಸಿ ಎಐಡಿಎಸ್ಓ ನೇತೃತ್ವದಲ್ಲಿ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ರಚಿಸಿಕೊಂಡು ಕಳೆದ 5 ತಿಂಗಳಿಂದ ಗ್ರಾಮಸ್ಥರು ಹಾಗೂ ಪೋಷಕರು ಹೋರಾಟ ನಡೆಸಿದ್ದೇವೆ. ಗ್ರಾಮ ಮಟ್ಟದಿಂದ ಆರಂಭಿಸಿ ಜಿಲ್ಲಾ ಮಟ್ಟ ಹಾಗೂ ರಾಜ್ಯ ಮಟ್ಟದ ವರೆಗೂ ಪ್ರತಿಭಟನೆ ಹಾಗೂ ಸಮಾವೇಶಗಳನ್ನು ನಡೆಸಿದ್ದೇವೆ. ನಾಡಿನ ಹೆಸರಾಂತ ಸಾಹಿತಿಗಳು ಹಾಗೂ ಶಿಕ್ಷಣ ತಜ್ಞರು ನಮ್ಮೊಂದಿಗೆ ಧ್ವನಿಗೂಡಿಸಿದ್ದಾರೆ. ನಮ್ಮೂರ ಶಾಲೆ ನಮ್ಮೂರ ಮಕ್ಕಳ ಜ್ಞಾನದ ಮಂದಿರವಾಗಿದೆ. ನಮ್ಮೂರ ಶಾಲೆಯನ್ನು ಮುಚ್ಚಲು/ವಿಲೀನಗೊಳಿಸಲು ನಮ್ಮ ಒಪ್ಪಿಗೆಯಿಲ್ಲ ಎಂದು.
ಅಷ್ಟೇ ಅಲ್ಲದೇ ಸರ್ಕಾರವು 1ನೇ ತರಗತಿಯಿಂದಲೇ ಕನ್ನಡ ಮಾಧ್ಯಮದೊಂದಿಗೆ ಇಂಗ್ಲಿಷ್ ಮಾಧ್ಯಮ ಕೂಡ ಆರಂಭಿಸುತ್ತಿದೆ. ದ್ವಿಭಾಷಾ ಮಾಧ್ಯಮದ ಹೆಸರಲ್ಲಿ ಕೇವಲ ಇಂಗ್ಲಿಷ್ ಮಾಧ್ಯಮ ಕಲಿಸಲು ಹೇರಿಕೆ ನಡೆಸಲಾಗುತ್ತಿದೆ. ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ತೆಗೆದು ಹಾಕುವುದನ್ನು ಒಪ್ಪಲು ಸಾಧ್ಯವಿಲ್ಲ ಎಂಬುದು ಜನರ ಆಗ್ರಹ.
ಈ ದೇಶದ ಶಿಕ್ಷಣಕ್ಕಾಗಿ ಹೋರಾಡಿದ ಮಹಾತ್ಮಾ ಜ್ಯೋತಿಬಾಫುಲೆ ಅವರದು ಈ ವರ್ಷ ಜನ್ಮ ದ್ವಿ ಶತಮಾನೋತ್ಸವ ಸಂದರ್ಭದಲ್ಲಿ ಅವರ ಜೀವನ ಹೋರಾಟದಿಂದ ಸ್ಫೂರ್ತಿ ಪಡೆದು ನಮ್ಮೂರ ಶಾಲೆಯನ್ನು ಉಳಿಸಿಕೊಳ್ಳಲು ಪಣತೊಡಣ ಎಂದು ಕರೆ ನೀಡಿದರು.
ಈ ಸಂಧರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಜಿಲ್ಲಾ ಉಪಾಧ್ಯಕ್ಷರಾದ ಶಾಂತ ಮತ್ತು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಸದಸ್ಯರಾದ ನೀಲಮ್ಮ,
ವಂಡ್ರಮ್ಮ ಮತ್ತು ಪೋಷಕರು ಸಾಕಮ್ಮ, ಇನ್ನು ಹಲವರು ಉಪಸ್ಥಿತರಿದ್ದರು
ಬಳ್ಳಾರಿ, ಮೇ.18: ಬಳ್ಳಾರಿ ತಾಲೂಕಿನ ತಗ್ಗಿನ ಬೂದಿಹಾಳ ಗ್ರಾಮದಲ್ಲಿ ಎಐಡಿಎಸ್ಓ (ಆಲ್ ಇಂಡಿಯಾ ಡೆಮೊಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್) ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ನೇತೃತ್ವದಲ್ಲಿ ನಮ್ಮ ತಗ್ಗಿನ ಬೂದಿಹಾಳ ಗ್ರಾಮದ ಶಾಲೆಯಲ್ಲಿ 120ಕ್ಕೂ ಹೆಚ್ಚಿನ ಮಕ್ಕಳು ಓದುತ್ತಿದ್ದು ಎಲ್ಲರೂ ರೈತ ಕೂಲಿ ಕಾರ್ಮಿಕರ ಮಕ್ಕಳು 5 ಕಿ.ಮೀ ದೂರವಿರುವ ಕಕ್ಕಬೇವಿನಹಳ್ಳಿ ಆರಂಭವಾಗುವ ಕೆಪಿಎಸ್ ಶಾಲೆಗೆ ಮಕ್ಕಳನ್ನು ಕಳುಹಿಸಲು ಸಾದ್ಯವಿಲ್ಲ, ನಮ್ಮ ಮಕ್ಕಳನ್ನು ಸೇರಿಸಲು ಒಪ್ಪಿಗೆ ಇರುವುದಿಲ್ಲ ಎಂದು ನಮ್ಮ ಊರಿನ ಶಾಲೆಗೆ ಸಮರ್ಪಕ ಸೌಲಭ್ಯಗಳನ್ನು ನೀಡಿ ನಮ್ಮ ಊರಿನಲ್ಲಿ ಶಾಲೆ ಉಳಿಯಬೇಕು ಎಂದು ತಗ್ಗಿನ ಬೂದಿಹಾಳ್ ಗ್ರಾಮದ ಪೋಷಕರು ಹಾಗು ಗ್ರಾಮಸ್ಥರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂದೆ ಬ್ಯಾನರ್ ಕಟ್ಟಿ, ಹೋರಾಟ ನಡೆಸಿದರು.
ನಂತರ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿಯಲ್ಲಿ ಶಾಲೆಗಳನ್ನು ವಿಲೀನಗೊಳಿಸುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ತೆಗ್ಗಿನ ಬೂದಿಹಾಳ ಗ್ರಾಮದ ಶಾಲೆಯನ್ನು ಉಳಿಸಬೇಕೆಂದು ಗ್ರಾಮ ಪಂಚಾಯಿತಿಯ ಮುಂದೆ ಪಿಡಿಓ ಮುಖಾಂತರ ಡಿಡಿಪಿಐ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಹೋರಾಟವನ್ನು ಉದ್ದೇಶಿಸಿ ಎಐಡಿಎಸ್ಓ ಜಿಲ್ಲಾ ಉಪಾಧ್ಯಕ್ಷರು ಎಂ.ಶಾಂತಿ ಅವರು ಮಾತನಾಡುತ್ತಾ... ನಮ್ಮೂರ ಶಾಲೆ ನಮ್ಮ ಊರಿನಲ್ಲಿ ಉಳಿಯಬೇಕು ಮತ್ತು ಕೆಪಿಎಸ್ ಯೋಜನೆ ರದ್ದಾಗಬೇಕೆಂದು ಆಗ್ರಹಿಸಿ ಎಐಡಿಎಸ್ಓ ನೇತೃತ್ವದಲ್ಲಿ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ರಚಿಸಿಕೊಂಡು ಕಳೆದ 5 ತಿಂಗಳಿಂದ ಗ್ರಾಮಸ್ಥರು ಹಾಗೂ ಪೋಷಕರು ಹೋರಾಟ ನಡೆಸಿದ್ದೇವೆ. ಗ್ರಾಮ ಮಟ್ಟದಿಂದ ಆರಂಭಿಸಿ ಜಿಲ್ಲಾ ಮಟ್ಟ ಹಾಗೂ ರಾಜ್ಯ ಮಟ್ಟದ ವರೆಗೂ ಪ್ರತಿಭಟನೆ ಹಾಗೂ ಸಮಾವೇಶಗಳನ್ನು ನಡೆಸಿದ್ದೇವೆ. ನಾಡಿನ ಹೆಸರಾಂತ ಸಾಹಿತಿಗಳು ಹಾಗೂ ಶಿಕ್ಷಣ ತಜ್ಞರು ನಮ್ಮೊಂದಿಗೆ ಧ್ವನಿಗೂಡಿಸಿದ್ದಾರೆ. ನಮ್ಮೂರ ಶಾಲೆ ನಮ್ಮೂರ ಮಕ್ಕಳ ಜ್ಞಾನದ ಮಂದಿರವಾಗಿದೆ. ನಮ್ಮೂರ ಶಾಲೆಯನ್ನು ಮುಚ್ಚಲು/ವಿಲೀನಗೊಳಿಸಲು ನಮ್ಮ ಒಪ್ಪಿಗೆಯಿಲ್ಲ ಎಂದು.
ಅಷ್ಟೇ ಅಲ್ಲದೇ ಸರ್ಕಾರವು 1ನೇ ತರಗತಿಯಿಂದಲೇ ಕನ್ನಡ ಮಾಧ್ಯಮದೊಂದಿಗೆ ಇಂಗ್ಲಿಷ್ ಮಾಧ್ಯಮ ಕೂಡ ಆರಂಭಿಸುತ್ತಿದೆ. ದ್ವಿಭಾಷಾ ಮಾಧ್ಯಮದ ಹೆಸರಲ್ಲಿ ಕೇವಲ ಇಂಗ್ಲಿಷ್ ಮಾಧ್ಯಮ ಕಲಿಸಲು ಹೇರಿಕೆ ನಡೆಸಲಾಗುತ್ತಿದೆ. ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ತೆಗೆದು ಹಾಕುವುದನ್ನು ಒಪ್ಪಲು ಸಾಧ್ಯವಿಲ್ಲ ಎಂಬುದು ಜನರ ಆಗ್ರಹ.
ಈ ದೇಶದ ಶಿಕ್ಷಣಕ್ಕಾಗಿ ಹೋರಾಡಿದ ಮಹಾತ್ಮಾ ಜ್ಯೋತಿಬಾಫುಲೆ ಅವರದು ಈ ವರ್ಷ ಜನ್ಮ ದ್ವಿ ಶತಮಾನೋತ್ಸವ ಸಂದರ್ಭದಲ್ಲಿ ಅವರ ಜೀವನ ಹೋರಾಟದಿಂದ ಸ್ಫೂರ್ತಿ ಪಡೆದು ನಮ್ಮೂರ ಶಾಲೆಯನ್ನು ಉಳಿಸಿಕೊಳ್ಳಲು ಪಣತೊಡಣ ಎಂದು ಕರೆ ನೀಡಿದರು.
ಈ ಸಂಧರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಜಿಲ್ಲಾ ಉಪಾಧ್ಯಕ್ಷರಾದ ಶಾಂತ ಮತ್ತು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಸದಸ್ಯರಾದ ನೀಲಮ್ಮ,
ವಂಡ್ರಮ್ಮ ಮತ್ತು ಪೋಷಕರು ಸಾಕಮ್ಮ, ಇನ್ನು ಹಲವರು ಉಪಸ್ಥಿತರಿದ್ದರು

“ಎಂಜಿನಿಯರಿಂಗ್ ಕಾಲೇಜು ರಸಾಯನಶಾಸ್ತ್ರ ಶಿಕ್ಷಣ: ಶಿಕ್ಷಕರನ್ನು ಸಬಲೀಕರಣಗೊಳಿಸುವ ಕಾರ್ಯಕ್ರಮ