

18th May 2026

ಬಳ್ಳಾರಿ, ಮೇ.18: ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಯಾಗಿದ್ದಾಗ ಮಾಡಿದ್ದ ಒಳ ಮೀಸಲಾತಿಯನ್ನು ಜಾರಿಗೊಳಿಸಬಾರದು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಮೀಸಲಾತಿ ಅನುಷ್ಠಾನ ವಿಷಯದಲ್ಲಿ ಗೊಂದಲ ಸೃಷ್ಟಿಸಿದೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷಹ ಎಚ್.ಹನುಮಂತಪ್ಪ ಆರೋಪಿಸಿದ್ದಾರೆ.
ಅವರು ನಿನ್ನೆ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ
ಸುದ್ದಿಗೋಷ್ಠಿಯಲ್ಲಿ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ನಿಜಕ್ಕೂ ದಲಿತ ಪರ ಕಾಳಜಿಯಿದ್ದಿದ್ದರೆ ನಾಗಮೋಹನ್ ದಾಸ್ ವರದಿಯನ್ನು ಅನುಷ್ಠಾನಗೊಳಿಸಬೇಕಿತ್ತು. ಆದರೆ, ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ದಲಿತರ ಮತಗಳು ಮಾತ್ರ ಬೇಕೇ ವಿನಾ, ದಲಿತರ ಕಲ್ಯಾಣದ ಯಾವ ಕಾಳಜಿಯೂ ಈ ಸರ್ಕಾರಕ್ಕಿಲ್ಲ. ಶೋಷಿತ ಸಮುದಾಯಗಳ ಅಭಿವೃದ್ಧಿಗೆಂದೇ ಮೀಸಲಾಗಿರುವ ಎಸಿಪಿ, ಟಿಎಸ್ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿರಲಿಲ್ಲ ಎಂದು ಆರೋಪಿಸಿದರು.
ದಲಿತರಿಗೆ ಒಳ ಮೀಸಲಾತಿ ವಿಚಾರದಲ್ಲಿ ನೆರೆಯ ತೆಲಂಗಾಣ ಸರ್ಕಾರ ತೆಗೆದುಕೊಂಡ ಮಹತ್ವದ ನಿರ್ಧಾರವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ತೆಗೆದುಕೊಳ್ಳದಿರುವ ಕುರಿತು ಕಾಂಗ್ರೆಸ್ ಪಕ್ಷದಲ್ಲಿರುವ ದಲಿತ ನಾಯಕರೇ ಧ್ವನಿ ಎತ್ತದಿರುವುದು ವಿಪರ್ಯಾಸ ಸಂಗತಿಯಾಗಿದೆ. ಶೋಷಿತ ಸಮುದಾಯಗಳ ವಿಚಾರ ಬಂದಾಗ ಬಿಜೆಪಿ ಈ ಮೊದಲಿನಿಂದಲೂ ಧ್ವನಿ ಎತ್ತುತ್ತಲೇ ಬಂದಿದೆ. ಮೀಸಲಾತಿ ಜಾರಿ ನೀತಿಯಲ್ಲಿ ಕಾಂಗ್ರೆಸ್ ಮಾಡುತ್ತಿರುವ ಗೊಂದಲ ಹಾಗೂ ವಿಭಿನ್ನ ನೀತಿಗಳ ವಿರುದ್ದ ಬಿಜೆಪಿ ಹೋರಾಟ ನಡೆಸಲಿದೆಂದರು.
ವಿಧಾನಪರಿಷತ್ ಸದಸ್ಯ ವೈ.ಎಂ.ಸತೀಶ್ ನಗರದ ಮಾಜಿ ಶಾಸಕ ಜಿ.ಸೋಮಶೇಖರ ರೆಡ್ಡಿ ಮಾತನಾಡಿ, ದಲಿತರ ಮತಗಳನ್ನು ಪಡೆದು ಅಧಿಕಾರಕ್ಕೆ ಬರುವ ಕಾಂಗ್ರೆಸ್ಗೆ ಈ ಸಮುದಾಯಗಳ ಅಭಿವೃದ್ಧಿಯ ಬಗ್ಗೆ ಕಾಳಜಿ ಇಲ್ಲ. ಮೀಸಲಾತಿ ವಿಚಾರದಲ್ಲಿನ ಗೊಂದಲವನ್ನು ತಿಳಿಗೊಳಿಸಬೇಕು ಎಂದು ಆಗ್ರಹಿಸಿದರು.
ಬಳ್ಳಾರಿ, ಮೇ.18: ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಯಾಗಿದ್ದಾಗ ಮಾಡಿದ್ದ ಒಳ ಮೀಸಲಾತಿಯನ್ನು ಜಾರಿಗೊಳಿಸಬಾರದು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಮೀಸಲಾತಿ ಅನುಷ್ಠಾನ ವಿಷಯದಲ್ಲಿ ಗೊಂದಲ ಸೃಷ್ಟಿಸಿದೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷಹ ಎಚ್.ಹನುಮಂತಪ್ಪ ಆರೋಪಿಸಿದ್ದಾರೆ.
ಅವರು ನಿನ್ನೆ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ
ಸುದ್ದಿಗೋಷ್ಠಿಯಲ್ಲಿ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ನಿಜಕ್ಕೂ ದಲಿತ ಪರ ಕಾಳಜಿಯಿದ್ದಿದ್ದರೆ ನಾಗಮೋಹನ್ ದಾಸ್ ವರದಿಯನ್ನು ಅನುಷ್ಠಾನಗೊಳಿಸಬೇಕಿತ್ತು. ಆದರೆ, ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ದಲಿತರ ಮತಗಳು ಮಾತ್ರ ಬೇಕೇ ವಿನಾ, ದಲಿತರ ಕಲ್ಯಾಣದ ಯಾವ ಕಾಳಜಿಯೂ ಈ ಸರ್ಕಾರಕ್ಕಿಲ್ಲ. ಶೋಷಿತ ಸಮುದಾಯಗಳ ಅಭಿವೃದ್ಧಿಗೆಂದೇ ಮೀಸಲಾಗಿರುವ ಎಸಿಪಿ, ಟಿಎಸ್ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿರಲಿಲ್ಲ ಎಂದು ಆರೋಪಿಸಿದರು.
ದಲಿತರಿಗೆ ಒಳ ಮೀಸಲಾತಿ ವಿಚಾರದಲ್ಲಿ ನೆರೆಯ ತೆಲಂಗಾಣ ಸರ್ಕಾರ ತೆಗೆದುಕೊಂಡ ಮಹತ್ವದ ನಿರ್ಧಾರವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ತೆಗೆದುಕೊಳ್ಳದಿರುವ ಕುರಿತು ಕಾಂಗ್ರೆಸ್ ಪಕ್ಷದಲ್ಲಿರುವ ದಲಿತ ನಾಯಕರೇ ಧ್ವನಿ ಎತ್ತದಿರುವುದು ವಿಪರ್ಯಾಸ ಸಂಗತಿಯಾಗಿದೆ. ಶೋಷಿತ ಸಮುದಾಯಗಳ ವಿಚಾರ ಬಂದಾಗ ಬಿಜೆಪಿ ಈ ಮೊದಲಿನಿಂದಲೂ ಧ್ವನಿ ಎತ್ತುತ್ತಲೇ ಬಂದಿದೆ. ಮೀಸಲಾತಿ ಜಾರಿ ನೀತಿಯಲ್ಲಿ ಕಾಂಗ್ರೆಸ್ ಮಾಡುತ್ತಿರುವ ಗೊಂದಲ ಹಾಗೂ ವಿಭಿನ್ನ ನೀತಿಗಳ ವಿರುದ್ದ ಬಿಜೆಪಿ ಹೋರಾಟ ನಡೆಸಲಿದೆಂದರು.
ವಿಧಾನಪರಿಷತ್ ಸದಸ್ಯ ವೈ.ಎಂ.ಸತೀಶ್ ನಗರದ ಮಾಜಿ ಶಾಸಕ ಜಿ.ಸೋಮಶೇಖರ ರೆಡ್ಡಿ ಮಾತನಾಡಿ, ದಲಿತರ ಮತಗಳನ್ನು ಪಡೆದು ಅಧಿಕಾರಕ್ಕೆ ಬರುವ ಕಾಂಗ್ರೆಸ್ಗೆ ಈ ಸಮುದಾಯಗಳ ಅಭಿವೃದ್ಧಿಯ ಬಗ್ಗೆ ಕಾಳಜಿ ಇಲ್ಲ. ಮೀಸಲಾತಿ ವಿಚಾರದಲ್ಲಿನ ಗೊಂದಲವನ್ನು ತಿಳಿಗೊಳಿಸಬೇಕು ಎಂದು ಆಗ್ರಹಿಸಿದರು.

ಇಕ್ಬಾಲ್ ಅನ್ಸಾರಿಗೆ ಕೋಕ್: ಶೇಖ್ನಬಿಸಾಬ್ ಆಕ್ರೋಶ- ಹಿಟ್ನಾಳ್ ಕುಟುಂಬಕ್ಕೆ ಮತ್ತು ಕಾಂಗ್ರೆಸ್ಸಿಗೆ ತಕ್ಕ ಪಾಠ

ಐಟಿ ಇಲಾಖೆಯ ದತ್ತಾಂಶದಿಂದ ಅನರ್ಹರ ಬೇಟೆ: ಬಳ್ಳಾರಿಯಲ್ಲಿ 4,764 ಬಿಪಿಎಲ್ ಕಾರ್ಡ್ ರದ್ದು ಅನ್ನಭಾಗ್ಯ ಸೌಲಭ್ಯ ದುರುಪಯೋಗಕ್ಕೆ ಕಡಿವಾಣ; ಅಧಿಕಾರಿಗಳ ಡಿಜಿಟಲ್ ಕಾರ್ಯಾಚರಣೆ ತೀವ್ರ
ಬಿಎಲ್ಎ-2 ನೇಮಕ ಪ್ರಕ್ರೀಯೆ: ಇಕ್ಬಾಲ್ ಅನ್ಸಾರಿಗೆ ಕೋಕ್..!!- ಗಂಗಾವತಿ ಕ್ಷೇತ್ರದ ಉಸ್ತುವಾರಿ ಸಂಸದ ಹಿಟ್ನಾಳ್ ಹೆಗಲಿಗೆ..!- ಚುನಾವಣಾ ಆಯೋಗಕ್ಕೆ ಕೆಪಿಸಿಸಿಯಿಂದ ಪತ್ರ ರವಾನೆ

ಲಕ್ಕುಂಡಿಯನ್ನು ದೇಶದ ಅಗ್ರ ಪುರಾತತ್ವ ಕೇಂದ್ರವನ್ನಾಗಿಸಲು ಸಚಿವ ಎಚ್.ಕೆ. ಪಾಟೀಲ ಸೂಚನೆ