

21st May 2026

ಬಳ್ಳಾರಿ, ಮೇ.20: ತಾಲೂಕಿನ ಕೊಳಗಲ್ಲು ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಮಣ್ಣು ದಂಧೆಯನ್ನು ಪ್ರಶ್ನಿಸಿದ ಕಾಂಗ್ರೆಸ್ ಹಿರಿಯ ಮುಖಂಡ ಕೊಳಗಲ್ ಹುಲಿಯಪ್ಪ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಈ ಘಟನೆಯ ಹಿಂದೆ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ದಂಧೆಕೋರರ ಸಂಚು ಇದೆ ಎಂದು ಆರೋಪಿಸಲಾಗಿದೆ.
ಗ್ರಾಮದಲ್ಲಿ ಸರ್ಕಾರಿ ಜಾಗದಿಂದ ಅಕ್ರಮವಾಗಿ ಮಣ್ಣು ಸಾಗಾಟ ನಡೆಯುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಡಿಎಂಜಿ ಅಧಿಕಾರಿ ನವೀನ್ ಅವರು ಯಾವುದೇ ಪೊಲೀಸ್ ಭದ್ರತೆ ಅಥವಾ ಸಂಬಂಧಿತ ಅಧಿಕಾರಿಗಳನ್ನು ಕರೆದುಕೊಳ್ಳದೆ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರೂ ಆಗಿರುವ ಹುಲಿಯಪ್ಪ ಅವರನ್ನು ರಾತ್ರಿ ವೇಳೆ ಸ್ಥಳಕ್ಕೆ ಕರೆದುಕೊಂಡು ಹೋದರು ಎನ್ನಲಾಗಿದೆ.
ಸ್ಥಳಕ್ಕೆ ತೆರಳಿದ ವೇಳೆ ಅಕ್ರಮ ಮಣ್ಣು ಸಾಗಾಟವನ್ನು ಕಂಡ ಹುಲಿಯಪ್ಪ ಅವರು “ಇದು ಕಾನೂನುಬಾಹಿರ, ಕೂಡಲೇ ನಿಲ್ಲಿಸಬೇಕು” ಎಂದು ಪ್ರಶ್ನಿಸಿದ ಸಂದರ್ಭದಲ್ಲಿ, ಅಲ್ಲಿದ್ದ ಕೆಲವರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಡಿಎಂಜಿ ಅಧಿಕಾರಿ ನವೀನ್ ಅವರ ಸಮ್ಮುಖದಲ್ಲೇ ನಡೆದಿತ್ತೆಂದು ಹುಲಿಯಪ್ಪ ಹೇಳಿದ್ದಾರೆ.
ಹಲ್ಲೆ ನಡೆದ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಗಾಯಗೊಂಡ ಹುಲಿಯಪ್ಪ ಅವರನ್ನು ಅಲ್ಲಿದ್ದ ಸರ್ಕಾರಿ ವಾಹನದಲ್ಲಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಹುಲಿಯಪ್ಪ, “ನನ್ನನ್ನು ಸ್ಥಳಕ್ಕೆ ಕರೆದುಕೊಂಡು ಹೋದ ಡಿಎಂಜಿ ನವೀನ್ ಅವರೇ ಘಟನೆಯ ನೈತಿಕ ಹೊಣೆ ಹೊತ್ತಿರಬೇಕು. ಮೇಲಾಧಿಕಾರಿಗಳಿಗೂ ಮಾಹಿತಿ ನೀಡದೇ, ಪೊಲೀಸ್ ಭದ್ರತೆ ಇಲ್ಲದೇ ಸ್ಥಳಕ್ಕೆ ಕರೆದುಕೊಂಡು ಹೋಗಿರುವುದು ಗಂಭೀರ ನಿರ್ಲಕ್ಷ್ಯ” ಎಂದು ಆರೋಪಿಸಿದ್ದಾರೆ.
ಘಟನೆ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ನರಸಿಂಹ, ಗೋಪಾಲ, ಅನಿಲ್, ವೀರೇಶ್, ಹುಲುಗ, ಬುಡ್ಡಪ್ಪ, ದೊಡ್ಡಿ, ಅಶೋಕ ಸೇರಿದಂತೆ ಸುಮಾರು 15 ಮಂದಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಹುಲಿಯಪ್ಪ ಒತ್ತಾಯಿಸಿದ್ದಾರೆ. ಜೊತೆಗೆ ಡಿಎಂಜಿ ಅಧಿಕಾರಿ ನವೀನ್ ಅವರ ಪಾತ್ರದ ಮೇಲೂ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಸರ್ಕಾರಿ ಭೂಮಿಯಲ್ಲಿ ಅಕ್ರಮ ಮಣ್ಣು ದಂಧೆ ನಡೆಯುತ್ತಿದ್ದರೂ ಇದುವರೆಗೆ ಪ್ರಮುಖ ಆರೋಪಿಗಳನ್ನು ಬಂಧಿಸದಿರುವುದು ಸಾರ್ವಜನಿಕ ವಲಯದಲ್ಲಿ ಅನುಮಾನಗಳಿಗೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಬಳ್ಳಾರಿ, ಮೇ.20: ತಾಲೂಕಿನ ಕೊಳಗಲ್ಲು ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಮಣ್ಣು ದಂಧೆಯನ್ನು ಪ್ರಶ್ನಿಸಿದ ಕಾಂಗ್ರೆಸ್ ಹಿರಿಯ ಮುಖಂಡ ಕೊಳಗಲ್ ಹುಲಿಯಪ್ಪ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಈ ಘಟನೆಯ ಹಿಂದೆ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ದಂಧೆಕೋರರ ಸಂಚು ಇದೆ ಎಂದು ಆರೋಪಿಸಲಾಗಿದೆ.
ಗ್ರಾಮದಲ್ಲಿ ಸರ್ಕಾರಿ ಜಾಗದಿಂದ ಅಕ್ರಮವಾಗಿ ಮಣ್ಣು ಸಾಗಾಟ ನಡೆಯುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಡಿಎಂಜಿ ಅಧಿಕಾರಿ ನವೀನ್ ಅವರು ಯಾವುದೇ ಪೊಲೀಸ್ ಭದ್ರತೆ ಅಥವಾ ಸಂಬಂಧಿತ ಅಧಿಕಾರಿಗಳನ್ನು ಕರೆದುಕೊಳ್ಳದೆ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರೂ ಆಗಿರುವ ಹುಲಿಯಪ್ಪ ಅವರನ್ನು ರಾತ್ರಿ ವೇಳೆ ಸ್ಥಳಕ್ಕೆ ಕರೆದುಕೊಂಡು ಹೋದರು ಎನ್ನಲಾಗಿದೆ.
ಸ್ಥಳಕ್ಕೆ ತೆರಳಿದ ವೇಳೆ ಅಕ್ರಮ ಮಣ್ಣು ಸಾಗಾಟವನ್ನು ಕಂಡ ಹುಲಿಯಪ್ಪ ಅವರು “ಇದು ಕಾನೂನುಬಾಹಿರ, ಕೂಡಲೇ ನಿಲ್ಲಿಸಬೇಕು” ಎಂದು ಪ್ರಶ್ನಿಸಿದ ಸಂದರ್ಭದಲ್ಲಿ, ಅಲ್ಲಿದ್ದ ಕೆಲವರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಡಿಎಂಜಿ ಅಧಿಕಾರಿ ನವೀನ್ ಅವರ ಸಮ್ಮುಖದಲ್ಲೇ ನಡೆದಿತ್ತೆಂದು ಹುಲಿಯಪ್ಪ ಹೇಳಿದ್ದಾರೆ.
ಹಲ್ಲೆ ನಡೆದ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಗಾಯಗೊಂಡ ಹುಲಿಯಪ್ಪ ಅವರನ್ನು ಅಲ್ಲಿದ್ದ ಸರ್ಕಾರಿ ವಾಹನದಲ್ಲಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಹುಲಿಯಪ್ಪ, “ನನ್ನನ್ನು ಸ್ಥಳಕ್ಕೆ ಕರೆದುಕೊಂಡು ಹೋದ ಡಿಎಂಜಿ ನವೀನ್ ಅವರೇ ಘಟನೆಯ ನೈತಿಕ ಹೊಣೆ ಹೊತ್ತಿರಬೇಕು. ಮೇಲಾಧಿಕಾರಿಗಳಿಗೂ ಮಾಹಿತಿ ನೀಡದೇ, ಪೊಲೀಸ್ ಭದ್ರತೆ ಇಲ್ಲದೇ ಸ್ಥಳಕ್ಕೆ ಕರೆದುಕೊಂಡು ಹೋಗಿರುವುದು ಗಂಭೀರ ನಿರ್ಲಕ್ಷ್ಯ” ಎಂದು ಆರೋಪಿಸಿದ್ದಾರೆ.
ಘಟನೆ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ನರಸಿಂಹ, ಗೋಪಾಲ, ಅನಿಲ್, ವೀರೇಶ್, ಹುಲುಗ, ಬುಡ್ಡಪ್ಪ, ದೊಡ್ಡಿ, ಅಶೋಕ ಸೇರಿದಂತೆ ಸುಮಾರು 15 ಮಂದಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಹುಲಿಯಪ್ಪ ಒತ್ತಾಯಿಸಿದ್ದಾರೆ. ಜೊತೆಗೆ ಡಿಎಂಜಿ ಅಧಿಕಾರಿ ನವೀನ್ ಅವರ ಪಾತ್ರದ ಮೇಲೂ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಸರ್ಕಾರಿ ಭೂಮಿಯಲ್ಲಿ ಅಕ್ರಮ ಮಣ್ಣು ದಂಧೆ ನಡೆಯುತ್ತಿದ್ದರೂ ಇದುವರೆಗೆ ಪ್ರಮುಖ ಆರೋಪಿಗಳನ್ನು ಬಂಧಿಸದಿರುವುದು ಸಾರ್ವಜನಿಕ ವಲಯದಲ್ಲಿ ಅನುಮಾನಗಳಿಗೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಶ್ರೀರಾಮರಂಗಾಪುರ ದಲಿತ ಕುಟುಂಬಗಳಿಗೆ ವಸತಿ ನಿವೇಶನಕ್ಕೆ ಆಗ್ರಹ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಡಳಿತಕ್ಕೆ ಮನವಿ