

23rd May 2026

ಬಳ್ಳಾರಿ: ರೈತರಿಗೆ ಗುಣಮಟ್ಟದ ಬೀಜಗಳ ಆಯ್ಕೆ, ವೈಜ್ಞಾನಿಕ ಬಿತ್ತನೆ ವಿಧಾನಗಳು ಹಾಗೂ ಆಧುನಿಕ ಕೃಷಿ ತಂತ್ರಜ್ಞಾನಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಬಿಡಿಸಿಸಿಐ) ನೇತೃತ್ವದಲ್ಲಿ ಮೇ 26ರಂದು ಎಪಿಎಂಸಿ ಆವರಣದಲ್ಲಿ ‘ಕೃಷಿ ಮೇಳ’ ಆಯೋಜಿಸಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ನೀರಾವರಿ ಮತ್ತು ಪಶು ಸಂಗೋಪನಾ ಇಲಾಖೆಗಳ ಸಹಯೋಗದಲ್ಲಿ ಈ ಮೇಳ ನಡೆಯಲಿದೆ. ಜೊತೆಗೆ ಬಳ್ಳಾರಿ ಜಿಲ್ಲಾ ಕಾಟನ್ ಅಸೋಸಿಯೇಷನ್, ಕರ್ನಾಟಕ ರಾಜ್ಯ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಜಿಲ್ಲಾ ಘಟಕ, ಎಪಿಎಂಸಿ ವರ್ತಕರ ಸಂಘ, ದಲ್ಲಾಲಿ ವರ್ತಕರ ಸಂಘ ಮತ್ತು ವಿವಿಧ ರೈತ ಸಮೂಹಗಳು ಸಹಕಾರ ನೀಡಿವೆ.
ನಗರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬಿಡಿಸಿಸಿಐ ಅಧ್ಯಕ್ಷ ಅವ್ವಾರು ಮಂಜುನಾಥ್ ಹಾಗೂ ಗೌರವ ಕಾರ್ಯದರ್ಶಿ ಕೆ.ಸಿ. ಸುರೇಶಬಾಬು, “ಮೇಳವು ಬೆಳಿಗ್ಗೆ 9 ಗಂಟೆಗೆ ಆರಂಭವಾಗಲಿದ್ದು, ರೈತರಿಗೆ ಕೃಷಿ ಕ್ಷೇತ್ರದ ತಜ್ಞರಿಂದ ನೇರ ಮಾಹಿತಿ ದೊರೆಯಲಿದೆ. ಹವಾಮಾನ ಬದಲಾವಣೆ, ಮಣ್ಣಿನ ಗುಣಮಟ್ಟ, ಉತ್ತಮ ಉತ್ಪಾದನೆಗಾಗಿ ಅಗತ್ಯವಿರುವ ಬಿತ್ತನೆ ವಿಧಾನಗಳು, ಗುಣಮಟ್ಟದ ಬೀಜ ಬಳಕೆ ಹಾಗೂ ಬೆಳೆ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸಗಳನ್ನು ಏರ್ಪಡಿಸಲಾಗಿದೆ” ಎಂದು ತಿಳಿಸಿದರು.
ರಾಜ್ಯದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಮೇಳವನ್ನು ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಹಾಗೂ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ. ಹನುಮಂತಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಕೃಷಿ ವಿಜ್ಞಾನಿಗಳಿಂದ ವಿಶೇಷ ಉಪನ್ಯಾಸ
ಮೇಳದಲ್ಲಿ ಕೃಷಿ ವಿಜ್ಞಾನಿಗಳಾದ ಡಾ. ಎ.ಜಿ. ಶ್ರೀನಿವಾಸ್, ಡಾ. ರವಿಶಂಕರ್ ಜಿ., ಡಾ. ಪಾಲಯ್ಯ ಹಾಗೂ ಡಾ. ಎಂ. ಭೀಮಣ್ಣ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಹತ್ತಿ ಸೇರಿದಂತೆ ವಿವಿಧ ಬೆಳೆಗಳ ವೈಜ್ಞಾನಿಕ ಬಿತ್ತನೆ ವಿಧಾನ, ಕೀಟ ಮತ್ತು ರೋಗ ನಿಯಂತ್ರಣ, ಮಣ್ಣಿನ ಆರೋಗ್ಯ ಕಾಪಾಡುವ ಕ್ರಮಗಳು, ನೀರಿನ ಸಮರ್ಪಕ ಬಳಕೆ ಹಾಗೂ ಉತ್ಪಾದನಾ ವೆಚ್ಚ ಕಡಿಮೆ ಮಾಡುವ ತಂತ್ರಜ್ಞಾನಗಳ ಕುರಿತು ಮಾಹಿತಿ ನೀಡಲಿದ್ದಾರೆ.
ರೈತರಿಗೆ ನೇರ ಸಂವಾದದ ಅವಕಾಶವೂ ಕಲ್ಪಿಸಲಾಗಿದ್ದು, ಕೃಷಿಗೆ ಸಂಬಂಧಿಸಿದ ವಿವಿಧ ಇಲಾಖೆಗಳ ತಜ್ಞರು ರೈತರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. ಕೃಷಿ ಪರಿಕರಗಳು, ಗುಣಮಟ್ಟದ ಬೀಜಗಳು, ರಸಗೊಬ್ಬರಗಳು ಮತ್ತು ಆಧುನಿಕ ಕೃಷಿ ಸಾಧನಗಳ ಪ್ರದರ್ಶನವೂ ಮೇಳದಲ್ಲಿ ಇರಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಜನಪ್ರತಿನಿಧಿಗಳು, ಅಧಿಕಾರಿಗಳ ಭಾಗಿ
ಕಾರ್ಯಕ್ರಮದಲ್ಲಿ ಮೇಯರ್ ಪಿ. ಗಾದೆಪ್ಪ, ಶಾಸಕರಾದ ಬಿ. ನಾಗೇಂದ್ರ, ನಾರಾ ಭರತರೆಡ್ಡಿ, ಜೆ.ಎನ್. ಗಣೇಶ್, ಬಿ.ಎಂ. ನಾಗರಾಜ್, ಈ. ಅನ್ನಪೂರ್ಣ ತುಕಾರಾಂ, ವೈ.ಎಂ. ಸತೀಶ್, ಸಂಸದರಾದ ಈ. ತುಕಾರಾಂ ಹಾಗೂ ಡಾ. ಸಯ್ಯದ್ ನಾಸೀರ್ ಹುಸೇನ್ ಸೇರಿದಂತೆ ಹಲವು ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಬುಡಾ ಅಧ್ಯಕ್ಷ ಜೆ.ಎಸ್. ಆಂಜನೇಯಲು, ಲಿಡ್ಕರ್ ಅಧ್ಯಕ್ಷ ಮುಂಡ್ರಗಿ ನಾಗರಾಜ್, ಎಪಿಎಂಸಿ ಅಧ್ಯಕ್ಷ ಕಟ್ಟೇಮನಿ ನಾಗೇಂದ್ರ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ, ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಹ ಭಾಗವಹಿಸಲಿದ್ದಾರೆ.
ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಎಂ. ಸೋಮಸುಂಧರ್, ಉಪ ನಿರ್ದೇಶಕ ಎಸ್.ಎನ್. ಮಂಜುನಾಥ್ ಮತ್ತು ಗರ್ಜಪ್ಪ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಶಶಿಕಾಂತ್ ಕಟ್ಟೀಮನಿ, ಹಿರಿಯ ಸಹಾಯಕ ನಿರ್ದೇಶಕ ಜೆ. ಶಂಕ್ರಪ್ಪ, ಎಪಿಎಂಸಿ ಕಾರ್ಯದರ್ಶಿ ವಿ.ಆರ್. ಜಯಕುಮಾರ್, ಪಶು ಸಂಗೋಪನಾ ಇಲಾಖೆಯ ಡಾ. ಸದಾಶಿವ ಉಪ್ಪಾರ್ ಹಾಗೂ ಡಾ. ರಾಜಶೇಖರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ.
ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮನವಿ
“ಮೇಳದ ಮೂಲಕ ರೈತರಿಗೆ ಕೃಷಿ ಕ್ಷೇತ್ರದ ಇತ್ತೀಚಿನ ತಂತ್ರಜ್ಞಾನಗಳು ಹಾಗೂ ವೈಜ್ಞಾನಿಕ ಮಾಹಿತಿ ತಲುಪಿಸುವ ಪ್ರಯತ್ನ ಮಾಡಲಾಗುತ್ತಿದೆ. ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು” ಎಂದು ಆಯೋಜಕರು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಎಸ್. ದೊಡ್ಡನಗೌಡ, ಉಪಾಧ್ಯಕ್ಷ ಸೊಂತಾ ಗಿರಿಧರ್, ಜಂಟಿ ಕಾರ್ಯದರ್ಶಿ ಡಾ. ಮರ್ಚೇಡ್ ಮಲ್ಲಿಕಾರ್ಜುನಗೌಡ, ವಿ. ರಾಮಚಂದ್ರ, ಖಜಾಂಚಿ ಸಿ.ಎಸ್. ಸತ್ಯನಾರಾಯಣ, ಪ್ರೆಸ್ ಮತ್ತು ಮೀಡಿಯಾ ಸಮಿತಿ ಅಧ್ಯಕ್ಷ ತಾಟಕೂರಿ ಶ್ರೀನಿವಾಸರಾವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬಳ್ಳಾರಿ: ರೈತರಿಗೆ ಗುಣಮಟ್ಟದ ಬೀಜಗಳ ಆಯ್ಕೆ, ವೈಜ್ಞಾನಿಕ ಬಿತ್ತನೆ ವಿಧಾನಗಳು ಹಾಗೂ ಆಧುನಿಕ ಕೃಷಿ ತಂತ್ರಜ್ಞಾನಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಬಿಡಿಸಿಸಿಐ) ನೇತೃತ್ವದಲ್ಲಿ ಮೇ 26ರಂದು ಎಪಿಎಂಸಿ ಆವರಣದಲ್ಲಿ ‘ಕೃಷಿ ಮೇಳ’ ಆಯೋಜಿಸಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ನೀರಾವರಿ ಮತ್ತು ಪಶು ಸಂಗೋಪನಾ ಇಲಾಖೆಗಳ ಸಹಯೋಗದಲ್ಲಿ ಈ ಮೇಳ ನಡೆಯಲಿದೆ. ಜೊತೆಗೆ ಬಳ್ಳಾರಿ ಜಿಲ್ಲಾ ಕಾಟನ್ ಅಸೋಸಿಯೇಷನ್, ಕರ್ನಾಟಕ ರಾಜ್ಯ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಜಿಲ್ಲಾ ಘಟಕ, ಎಪಿಎಂಸಿ ವರ್ತಕರ ಸಂಘ, ದಲ್ಲಾಲಿ ವರ್ತಕರ ಸಂಘ ಮತ್ತು ವಿವಿಧ ರೈತ ಸಮೂಹಗಳು ಸಹಕಾರ ನೀಡಿವೆ.
ನಗರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬಿಡಿಸಿಸಿಐ ಅಧ್ಯಕ್ಷ ಅವ್ವಾರು ಮಂಜುನಾಥ್ ಹಾಗೂ ಗೌರವ ಕಾರ್ಯದರ್ಶಿ ಕೆ.ಸಿ. ಸುರೇಶಬಾಬು, “ಮೇಳವು ಬೆಳಿಗ್ಗೆ 9 ಗಂಟೆಗೆ ಆರಂಭವಾಗಲಿದ್ದು, ರೈತರಿಗೆ ಕೃಷಿ ಕ್ಷೇತ್ರದ ತಜ್ಞರಿಂದ ನೇರ ಮಾಹಿತಿ ದೊರೆಯಲಿದೆ. ಹವಾಮಾನ ಬದಲಾವಣೆ, ಮಣ್ಣಿನ ಗುಣಮಟ್ಟ, ಉತ್ತಮ ಉತ್ಪಾದನೆಗಾಗಿ ಅಗತ್ಯವಿರುವ ಬಿತ್ತನೆ ವಿಧಾನಗಳು, ಗುಣಮಟ್ಟದ ಬೀಜ ಬಳಕೆ ಹಾಗೂ ಬೆಳೆ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸಗಳನ್ನು ಏರ್ಪಡಿಸಲಾಗಿದೆ” ಎಂದು ತಿಳಿಸಿದರು.
ರಾಜ್ಯದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಮೇಳವನ್ನು ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಹಾಗೂ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ. ಹನುಮಂತಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಕೃಷಿ ವಿಜ್ಞಾನಿಗಳಿಂದ ವಿಶೇಷ ಉಪನ್ಯಾಸ
ಮೇಳದಲ್ಲಿ ಕೃಷಿ ವಿಜ್ಞಾನಿಗಳಾದ ಡಾ. ಎ.ಜಿ. ಶ್ರೀನಿವಾಸ್, ಡಾ. ರವಿಶಂಕರ್ ಜಿ., ಡಾ. ಪಾಲಯ್ಯ ಹಾಗೂ ಡಾ. ಎಂ. ಭೀಮಣ್ಣ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಹತ್ತಿ ಸೇರಿದಂತೆ ವಿವಿಧ ಬೆಳೆಗಳ ವೈಜ್ಞಾನಿಕ ಬಿತ್ತನೆ ವಿಧಾನ, ಕೀಟ ಮತ್ತು ರೋಗ ನಿಯಂತ್ರಣ, ಮಣ್ಣಿನ ಆರೋಗ್ಯ ಕಾಪಾಡುವ ಕ್ರಮಗಳು, ನೀರಿನ ಸಮರ್ಪಕ ಬಳಕೆ ಹಾಗೂ ಉತ್ಪಾದನಾ ವೆಚ್ಚ ಕಡಿಮೆ ಮಾಡುವ ತಂತ್ರಜ್ಞಾನಗಳ ಕುರಿತು ಮಾಹಿತಿ ನೀಡಲಿದ್ದಾರೆ.
ರೈತರಿಗೆ ನೇರ ಸಂವಾದದ ಅವಕಾಶವೂ ಕಲ್ಪಿಸಲಾಗಿದ್ದು, ಕೃಷಿಗೆ ಸಂಬಂಧಿಸಿದ ವಿವಿಧ ಇಲಾಖೆಗಳ ತಜ್ಞರು ರೈತರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. ಕೃಷಿ ಪರಿಕರಗಳು, ಗುಣಮಟ್ಟದ ಬೀಜಗಳು, ರಸಗೊಬ್ಬರಗಳು ಮತ್ತು ಆಧುನಿಕ ಕೃಷಿ ಸಾಧನಗಳ ಪ್ರದರ್ಶನವೂ ಮೇಳದಲ್ಲಿ ಇರಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಜನಪ್ರತಿನಿಧಿಗಳು, ಅಧಿಕಾರಿಗಳ ಭಾಗಿ
ಕಾರ್ಯಕ್ರಮದಲ್ಲಿ ಮೇಯರ್ ಪಿ. ಗಾದೆಪ್ಪ, ಶಾಸಕರಾದ ಬಿ. ನಾಗೇಂದ್ರ, ನಾರಾ ಭರತರೆಡ್ಡಿ, ಜೆ.ಎನ್. ಗಣೇಶ್, ಬಿ.ಎಂ. ನಾಗರಾಜ್, ಈ. ಅನ್ನಪೂರ್ಣ ತುಕಾರಾಂ, ವೈ.ಎಂ. ಸತೀಶ್, ಸಂಸದರಾದ ಈ. ತುಕಾರಾಂ ಹಾಗೂ ಡಾ. ಸಯ್ಯದ್ ನಾಸೀರ್ ಹುಸೇನ್ ಸೇರಿದಂತೆ ಹಲವು ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಬುಡಾ ಅಧ್ಯಕ್ಷ ಜೆ.ಎಸ್. ಆಂಜನೇಯಲು, ಲಿಡ್ಕರ್ ಅಧ್ಯಕ್ಷ ಮುಂಡ್ರಗಿ ನಾಗರಾಜ್, ಎಪಿಎಂಸಿ ಅಧ್ಯಕ್ಷ ಕಟ್ಟೇಮನಿ ನಾಗೇಂದ್ರ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ, ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಹ ಭಾಗವಹಿಸಲಿದ್ದಾರೆ.
ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಎಂ. ಸೋಮಸುಂಧರ್, ಉಪ ನಿರ್ದೇಶಕ ಎಸ್.ಎನ್. ಮಂಜುನಾಥ್ ಮತ್ತು ಗರ್ಜಪ್ಪ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಶಶಿಕಾಂತ್ ಕಟ್ಟೀಮನಿ, ಹಿರಿಯ ಸಹಾಯಕ ನಿರ್ದೇಶಕ ಜೆ. ಶಂಕ್ರಪ್ಪ, ಎಪಿಎಂಸಿ ಕಾರ್ಯದರ್ಶಿ ವಿ.ಆರ್. ಜಯಕುಮಾರ್, ಪಶು ಸಂಗೋಪನಾ ಇಲಾಖೆಯ ಡಾ. ಸದಾಶಿವ ಉಪ್ಪಾರ್ ಹಾಗೂ ಡಾ. ರಾಜಶೇಖರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ.
ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮನವಿ
“ಮೇಳದ ಮೂಲಕ ರೈತರಿಗೆ ಕೃಷಿ ಕ್ಷೇತ್ರದ ಇತ್ತೀಚಿನ ತಂತ್ರಜ್ಞಾನಗಳು ಹಾಗೂ ವೈಜ್ಞಾನಿಕ ಮಾಹಿತಿ ತಲುಪಿಸುವ ಪ್ರಯತ್ನ ಮಾಡಲಾಗುತ್ತಿದೆ. ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು” ಎಂದು ಆಯೋಜಕರು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಎಸ್. ದೊಡ್ಡನಗೌಡ, ಉಪಾಧ್ಯಕ್ಷ ಸೊಂತಾ ಗಿರಿಧರ್, ಜಂಟಿ ಕಾರ್ಯದರ್ಶಿ ಡಾ. ಮರ್ಚೇಡ್ ಮಲ್ಲಿಕಾರ್ಜುನಗೌಡ, ವಿ. ರಾಮಚಂದ್ರ, ಖಜಾಂಚಿ ಸಿ.ಎಸ್. ಸತ್ಯನಾರಾಯಣ, ಪ್ರೆಸ್ ಮತ್ತು ಮೀಡಿಯಾ ಸಮಿತಿ ಅಧ್ಯಕ್ಷ ತಾಟಕೂರಿ ಶ್ರೀನಿವಾಸರಾವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

*ಬಳ್ಳಾರಿಯಲ್ಲಿ ಓಬಿಸಿ ಘಟಕಕ್ಕೆ ಹೊಸ ಚೈತನ್ಯ ತುಂಬಿದ ಡಿ.ಟಿ. ಶ್ರೀನಿವಾಸ್ ಭೇಟಿ* *ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಒಗ್ಗಟ್ಟಾಗಲಿ: ಡಿ.ಟಿ. ಶ್ರೀನಿವಾಸ್*

ಎನ್.ಐ.ಎ.ಎಸ್. ಸಂಸ್ಥೆ ಸಹಕಾರದೊಂದಿಗೆ ಲಕ್ಕುಂಡಿಯ ನೂರೊಂದು ಬಾವಿ ದೇವಾಲಯಗಳನ್ನು ದೇಶಕ್ಕೆ ಅನಾವರಣಗೊಳಿಸಲಾಗುವುದು: ಸಚಿವ ಎಚ್.ಕೆ. ಪಾಟೀಲ

ಸಂಸದ ರಾಜಶೇಖರ ಹಿಟ್ನಾಳ್ಗೆ ಗಂಗಾವತಿ ಬಿಎಲ್ಎ ಉಸ್ತುವಾರಿ- ಹೆಚ್.ಆಆರ್.ಶ್ರೀನಾಥ ಸ್ವಾಗತ: ನಮ್ಮನ್ನು ಕಡೆಗಣಿಸಬೇಡಿ- ಸಚಿವ ತಂಗಡಗಿ, ಸಂಸದ ಹಿಟ್ನಾಳ್, ಜಿಲ್ಲಾಧ್ಯಕ್ಷ ಬಯ್ಯಾಪುರ್ಗೆ ಎಚ್ಚರಿಕೆ-