ಬಾಗಲಕೋಟೆಯ ಭೋವಿ ಮಠಕ್ಕೆ ಸಚಿವ ವಿಜಯಾನಂದ ಕಾಶಪ್ಪನವರ ಭೇಟಿ
ಇವರಿಂದ: S. H MUDAKAVI MUDAKAVI
·
ಅಅಅ
ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮಿಗಳ ಆಶೀರ್ವಾದ ಪಡೆದ ಸಚಿವ ವಿಜಯಾನಂದ ಕಾಶಪ್ಪನವರ
ಬಾಗಲಕೋಟೆ : ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಇಲಾಖೆ ಸಚಿವರಾದ ವಿಜಯಾನಂದ ಎಸ್. ಕಾಶಪ್ಪನವರ ಅವರು ಇಂದು ಭೋವಿ ಮಠಕ್ಕೆ ಭೇಟಿ ನೀಡಿ, ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮಿಗಳ ದರ್ಶನ ಪಡೆದು ಆಶೀರ್ವಾದ ಪಡೆದುಕೊಂಡರು..
ಬಾಗಲಕೋಟೆಯ ಭೋವಿ ಮಠಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಅವರಿಗೆ ಮಠದ ಪದಾಧಿಕಾರಿಗಳು ಹಾಗೂ ಬೆಂಬಲಿಗರು ಆತ್ಮೀಯ ಸ್ವಾಗತ ಕೋರಿದರು.
ಬಳಿಕ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮಿಗಳ ಸನ್ನಿಧಿಗೆ ತೆರಳಿದ ಸಚಿವರು, ಶ್ರೀಗಳ ಪಾದಕ್ಕೆ ನಮಸ್ಕರಿಸಿ ಧನ್ಯತೆ ಮೆರೆದರು. ಇದೇ ವೇಳೆ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳು, ಜನಪರ ಯೋಜನೆಗಳು ಹಾಗೂ ಮಠದ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಗಳ ಕುರಿತು ಶ್ರೀಗಳೊಂದಿಗೆ ಸಚಿವರು ಸುದೀರ್ಘ ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ನಾಯಕರು ಹಾಗೂ ಮಠದ ಪ್ರಮುಖರು ಉಪಸ್ಥಿತರಿದ್ದರು.
ವರದಿ : ವಿನೋದ ಬಾರಿಗಿಡದ
ಸಾರಾಂಶ
ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮಿಗಳ ಆಶೀರ್ವಾದ ಪಡೆದ ಸಚಿವ ವಿಜಯಾನಂದ ಕಾಶಪ್ಪನವರ
ಬಾಗಲಕೋಟೆ : ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಇಲಾಖೆ ಸಚಿವರಾದ ವಿಜಯಾನಂದ ಎಸ್. ಕಾಶಪ್ಪನವರ ಅವರು ಇಂದು ಭೋವಿ ಮಠಕ್ಕೆ ಭೇಟಿ ನೀಡಿ, ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮಿಗಳ ದರ್ಶನ ಪಡೆದು ಆಶೀರ್ವಾದ ಪಡೆದುಕೊಂಡರು..
ಬಾಗಲಕೋಟೆಯ ಭೋವಿ ಮಠಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಅವರಿಗೆ ಮಠದ ಪದಾಧಿಕಾರಿಗಳು ಹಾಗೂ ಬೆಂಬಲಿಗರು ಆತ್ಮೀಯ ಸ್ವಾಗತ ಕೋರಿದರು.
ಬಳಿಕ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮಿಗಳ ಸನ್ನಿಧಿಗೆ ತೆರಳಿದ ಸಚಿವರು, ಶ್ರೀಗಳ ಪಾದಕ್ಕೆ ನಮಸ್ಕರಿಸಿ ಧನ್ಯತೆ ಮೆರೆದರು. ಇದೇ ವೇಳೆ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳು, ಜನಪರ ಯೋಜನೆಗಳು ಹಾಗೂ ಮಠದ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಗಳ ಕುರಿತು ಶ್ರೀಗಳೊಂದಿಗೆ ಸಚಿವರು ಸುದೀರ್ಘ ಸಮಾಲೋಚನೆ ನಡೆಸಿದರು.