
12th June 2025
ಬೈಲಹೊಂಗಲ- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ)ಹಿರೇಬಾಗೇವಾಡಿ ತಾಲ್ಲೂಕು ರವರ ವತಿಯಿಂದ ಮದನಬಾವಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪರಿಸರ ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಿದ್ದು ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವುದರ ಮೂಲಕ ವೇದಿಕೆಯಲ್ಲಿರುವ ಗಣ್ಯರು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯ ಶಿಕ್ಷಕರಾದ ಸಿ.ವಿ. ಸಂಗನಗೌಡ್ರ ರವರು ವಹಿಸಿಕೊಂಡಿದ್ದರು. ಮಖ್ಯ ಅಥಿತಿಗಳಾಗಿ ಶಿವನಾಯ್ಕರ್ ಬಿಆರ್ ಪಿ ಕಾರ್ಯಕ್ರಮವನ್ನು ಉದ್ದೇಶಿಸಿ ಪರಿಸರ ಸಂರಕ್ಷಣೆಯ ಬಗ್ಗೆ ಪರಿಸರದಿಂದ ಸಿಗುವ ಆರೋಗ್ಯದ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಹಲವಾರು ಸಾಮಾಜಿಕ,ಧಾರ್ಮಿಕ, ಗ್ರಾಮ ಶುಭೀಕ್ಷಾ, ಮಹಿಳೆಯರ ಸಬಲೀಕರಣ, ಶಿಷ್ಯ ವೇತನ, ಶಾಲೆ ಮತ್ತು ಕಾಲೇಜು ಮಕ್ಕಳಿಗೆ ದುಶ್ಚಟದ ಜಾಗೃತಿ, ಪರಿಸರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಕಾರ್ಯಕ್ರಮದ ಉದ್ದೇಶ ಗಳನ್ನು ಸದುಪಯೋಗ ಪಡೆದುಕೊಳ್ಳುವುದರ ಬಗ್ಗೆ ಪ್ರಾಸ್ತವಿಕ ಮಾತುಗಳೊಂದಿಗೆ ಶ್ರೀ ಕ್ಷೇ ಧ ಗ್ರಾ ಯೋ ತಾಲ್ಲೂಕು ಕೃಷಿ ಮೇಲ್ವಿಚಾರಕ ರಿಯಾಜ ಸಾಹೇಬ್ ದರಗಾದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, "ಕಾಡು ಬೆಳಸಿ ನಾಡು ಉಳಿಸಿ,, ಮನೆ ಅಂಗಳದಲ್ಲಿ ಜಮೀನಿನಲ್ಲಿ ಮರ ಗಿಡಗಳನ್ನು ಬೆಳಸುವುದರಿಂದ ನಾವೆಲ್ಲರೂ ಆರೋಗ್ಯಕರ ಜೀವನವನ್ನು ನೆಡೆಸಬಹುದು ಎಂಬುದರ ಬಗ್ಗೆ ಮಾಹಿತಿ ನೀಡಿದರು. ಪರಿಸರ ಬೆಳವಣಿಗೆಗೆ ನಾವೆಲ್ಲರೂ ಸಹಕರಿಸುವುದರಿಂದ ಮುಂದಿನ ಪೀಳಿಗೆಗೆ ತುಂಬಾ ಉಪಯೋಗವಾಗುತ್ತದೆ ಎಂದು ತಿಳಿಸಿದರು. ಶಾಲೆಯ ಸಹ ಶಿಕ್ಷಕರು ಹಾಗೂ ಸಿಬ್ಬಂದಿವರ್ಗದವರು ಕಾರ್ಯಕ್ಷೇತದ ಸೇವಾಪ್ರತಿನಿಧಿ ಸಂಘದ ಸದಸ್ಯರು ಮತ್ತು ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಿಕ್ಷಕಿ ಮಂಜುಳಾ ಶೆಟ್ಟರ ನಿರೂಪಿಸಿದರು.
ವಲಯದ ಮೇಲ್ವಿಚಾರಕರಾದ ಯಶೋಧ ವಂದಿಸಿದರು.