

9th July 2026

ಬೆಂಗಳೂರು: ಸಾಹಿತ್ಯ, ಪತ್ರಿಕೋದ್ಯಮ, ಶಿಕ್ಷಣ ಹಾಗೂ ಸಮಾಜ ಸೇವೆ ಕ್ಷೇತ್ರಗಳಲ್ಲಿ ತಮ್ಮ ವಿಶಿಷ್ಟ ಸಾಧನೆ ಮತ್ತು ಸಮಾಜಮುಖಿ ಕಾರ್ಯಗಳಿಂದ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ಬೆಳಗಾವಿ ಜಿಲ್ಲೆಯ ಸಾಹಿತಿ ಸಿ.ವಾಯ್.ಮೆಣಸಿನಕಾಯಿ ಅವರು 2026ನೇ ಸಾಲಿನ 'ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ'ಗೆ ಆಯ್ಕೆಯಾಗಿದ್ದಾರೆ.
ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ನೇಸರಗಿ ಗ್ರಾಮದ ಸಿ.ವಾಯ್.ಮೆಣಸಿನಕಾಯಿ ಅವರು ಗ್ರಂಥಾಲಯ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದು ಹಲವು ಕಾಲೇಜುಗಳಲ್ಲಿ ಗ್ರಂಥಪಾಲಕರಾಗಿ ಸೇವೆ ಸಲ್ಲಿಸಿದ್ದಾರೆ. ವಿಜಯ ಕರ್ನಾಟಕ, ಪ್ರಜಾವಾಣಿ, ಉದಯವಾಣಿ, ಸಂಯುಕ್ತ ಕರ್ನಾಟಕ ಕನ್ನಡಮ್ಮ ದಿನಪತ್ರಿಕೆ ಸೇರಿದಂತೆ ಅನೇಕ ಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪಸಂಪಾದಕರಾಗಿ ಕಳೆದ ೨೫ ವರ್ಷಗಳಿಂದ ಕಾರ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ಮಕ್ಕಳ ಸಾಹಿತ್ಯ ಪರಿಷತ್ತಿನ ಬೈಲಹೊಂಗಲ ತಾಲೂಕ ಅಧ್ಯಕ್ಷರಾಗಿದ್ದಾರೆ.
ಸಾಹಿತ್ಯ ಕ್ಷೇತ್ರದಲ್ಲೂ ಅಪಾರ ಆಸಕ್ತಿಯನ್ನು ಹೊಂದಿ ಈಗಾಗಲೇ ವಿಚಾರವಾಣಿ, ಕರುಣೆಯ ತೋಟ, ಅಗ್ನಿ ಪರೀಕ್ಷೆ, ಕಾಲಚಕ್ರ, ಬಾಳು ಬಂಗಾರ ಮತ್ತಿತರ ಕಥೆಗಳು, ಮೇರು ಸಾಧಕರು ಮತ್ತು ಐತಿಹಾಸಿಕ ಸ್ಥಳಗಳು, ಅಂಗಳದ ಗುಲಾಬಿ, ಬೈಲಹೊಂಗಲ ಸಾಂಸ್ಕೃತಿಕ ಪರಂಪರೆ, ಮನದ ಮಾತು. ಭೋಜರಾಜನ ಪುನರ್ಜನ್ಮ ಇನ್ನಿತರ ಕಥೆಗಳು, ನಾ ಹೋದರೆ ನಿನಗೆ ಸುಖ ಸಾಹಿತ್ಯ ಸಂಪದ ಸೇರಿದಂತೆ ೧೫ ಕೃತಿಗಳನ್ನು ರಚಿಸಿದ್ದಾರೆ.
ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸುಮಾರು ೪೦ ಕ್ಕೂ ಹೆಚ್ಚು ಪ್ರಶಸ್ತಿಗಳು ಮತ್ತು ಗೌರವಗಳಿಗೆ ಭಾಜನರಾಗಿದ್ದಾರೆ.
ಅವರ ಬಹುಮುಖ ಪ್ರತಿಭೆ, ಸಾಂಸ್ಕೃತಿಕ ಸಾಧನೆ, ಸಾಹಿತ್ಯ, ಶಿಕ್ಷಣ ಕ್ಷೇತ್ರದಲ್ಲಿನ ಕೊಡುಗೆ ಹಾಗೂ ಸಮಾಜಸೇವೆಯನ್ನು ಪರಿಗಣಿಸಿ ಬೆಂಗಳೂರಿನ ಶ್ರೀ ಅನ್ನಪೂರ್ಣೇಶ್ವರಿ ಭಜನಾ ಮಂಡಳಿ (ರಿ.) ಹಾಗೂ ಜನ ಸೇವಾ ಟ್ರಸ್ಟ್ (ರಿ.) ಸಹಯೋಗದಲ್ಲಿ ದಿ. ೧೨ ರಂದು ಆಯೋಜಿಸಿರುವ 'ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಕವಿಗೋಷ್ಠಿ' ಕಾರ್ಯಕ್ರಮದಲ್ಲಿ ಅವರಿಗೆ 2026ನೇ ಸಾಲಿನ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
ಪ್ರಶಸ್ತಿ ಪ್ರದಾನ ಸಮಾರಂಭವು 2026ರ ಜುಲೈ 12ರಂದು ಬೆಳಿಗ್ಗೆ 10:30 ಗಂಟೆಗೆ, ಶ್ರೀ ಸಿದ್ದಗಂಗಾ ಪ್ರಶಾಂತಾಲಯ, ರಾಜಾಜಿನಗರ, ಬೆಂಗಳೂರು ಇಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ವೇದಮೂರ್ತಿ ಡಾ. ಕಾಡಯ್ಯ ಶಿವಮೂರ್ತಿ ಹಿರೇಮಠ ಸ್ವಾಮೀಜಿಗಳು ವಹಿಸಲಿದ್ದು, ನಾಟಕ ಅಕಾಡೆಮಿ ಮಾಜಿ ಸದಸ್ಯ, ನಾಟಕ ನಿರ್ದೆಶಕ ಸಿ.ಎಂ.ತಿಮ್ಮಯ್ಯ, ಶ್ರೀ ಅನ್ನಪೂರ್ಣೇಶ್ವರಿ ಭಜನಾ ಮಂಡಳಿ (ರಿ.) ಅಧ್ಯಕ್ಷರಾದ ಬಿ.ವಿ. ಪೂರ್ಣಿಮಾ ಬಾಬು, ಜನ ಸೇವಾ ಟ್ರಸ್ಟ್ (ರಿ.) ಪದಾಧಿಕಾರಿಗಳು, ವಿವಿಧ ಗಣ್ಯರು, ಸಮಾಜಮುಖಂಡರು, ಶಿಕ್ಷಣತಜ್ಞರು, ಕಲಾವಿದರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಶಿಕ್ಷಣ ಇಲಾಖೆಯ ಅಪ್ಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ರಶ್ಮಿ ವಿ ಇವರು ಹಲಗಾ ಶಾಲೆಗೆ ಭೇಟಿ..

ಎಸ್ಐಆರ್ ವಿಚಾರದಲ್ಲಿ ರಾಯರೆಡ್ಡಿಗೆ ತಿಳುವಳಿಕೆ ಕೊರತೆ- ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ಕುಮಾರ ಗುಳಗಣ್ಣ ಟಾಂಗ್- ಎಸ್ಐಆರ್ ಮೇಲ್ವಿಚಾರಣೆ ರಾಜ್ಯದ ಹೊಣೆ ಎಂಬುದು ಅರಿಯಲಿ

ದಾವಣಗೆರೆಯಲ್ಲಿ ಜಿಲ್ಲಾ ಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ: ಪ್ರತಿಭಾವಂತ ಮಹಿಳಾ ಕಲಾವಿದರಿಗೆ ಸುವರ್ಣಾವಕಾಶ