ಕಾಸರಗೋಡು: ಚುಟುಕು ಸಾಹಿತ್ಯವನ್ನು ಪುನಶ್ಚೇತನಗೊಳಿಸಿ ಚುಟುಕು ಕವಿ, ಕವಯತ್ರಿಯರು, ಸಾಹಿತಿಗಳಲ್ಲಿ ಹುದುಗಿರುವ ಸಾಹಿತ್ಯ ಪ್ರತಿಭೆಯನ್ನು ಪ್ರೋತ್ಸಾಹಿಸುವುದಕ್ಕಾಗಿ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ,ಮೈಸೂರು ಇದರ ಕೇರಳ ಗಡಿನಾಡ ಘಟಕವಾಗಿ 2000 ದಲ್ಲಿ ಶಿವರಾಮ ಕಾಸರಗೋಡು ಅಧ್ಯಕ್ಷತೆಯಲ್ಲಿ ಅಸ್ತಿತ್ವಕ್ಕೆ ಬಂದ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಕಳೆದ 26 ವರ್ಷಗಳಿಂದ ರಚನಾತ್ಮಕವಾಗಿ ಚುಟುಕು ಸಾಹಿತ್ಯ ಮತ್ತು ಕನ್ನಡಪರ ಚಟುವಟಿಕೆಗಳನ್ನು ಹಮ್ಮಿಕೊಂಡಿರುತ್ತದೆ.
ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಇದರ ಆಶ್ರಯದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ. ),ಕನ್ನಡ ಗ್ರಾಮ, ಕಾಸರಗೋಡು ಇದರ ಸಹಯೋಗದಲ್ಲಿ ಕರ್ನಾಟಕ ಸರಕಾರ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇದರ ಸಹಕಾರದಲ್ಲಿ ಕಾಸರಗೋಡು ಮೀಪುಗುರಿ ಪಾರೆಕಟ್ಟೆಯ ಕನ್ನಡ ಗ್ರಾಮದಲ್ಲಿ 2026 ಅಗೋಸ್ತು 23 ಆದಿತ್ಯವಾರದಂದು ಅಪರಾಹ್ನ ಗಂಟೆ 3.30 ಕ್ಕೆ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ , ಚುಟುಕು ವಾಚನ ಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ.
ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ, ಕಿರಿಯ ಕವಿ, ಕವಯತ್ರಿಯರು ತಮ್ಮ ಹೆಸರು, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆಯನ್ನು ವಾಟ್ಸ್ ಪ್ ಮೂಲಕ ಕಳುಹಿಸಬೇಕು. ಚುಟುಕುಗಳು, ಕವನಗಳನ್ನು ವಾಚಿಸಲು ಅವಕಾಶ ನೀಡಲಾಗಿದೆ.
ಭಾಗವಹಿಸಿದ ಕವಿಗಳಿಗೆ ಪ್ರಮಾಣ ಪತ್ರ ಸಾಹಿತ್ಯ ಕೃತಿಗಳನ್ನು ನೀಡಿ ಗೌರವಿಸಲಾಗುವುದು.
ಶಿವರಾಮ ಕಾಸರಗೋಡು, ಅಧ್ಯಕ್ಷರು,ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ,ಕನ್ನಡ ಗ್ರಾಮ, ಕನ್ನಡ ಗ್ರಾಮ ರಸ್ತೆ, ಕಾಸರಗೋಡು-671121
ಮೊಬೈಲ್ :-9448572016







