

26th March 2026

ನೇಸರಗಿ- ಶಾಲೆಯ ಸರ್ವಾಂಗೀಣ ಪ್ರಗತಿಗೆ ಶಾಲಾ ಆಡಳಿತ ಮಂಡಳಿ ಶ್ರಮಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೋಳಿ ಹೇಳಿದರು.
ಸಮೀಪದ ದೇಶನೂರ ಗ್ರಾಮದ ವಿಕಾಸ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಬೇಟಿ ಆಡಳಿತ ಮಂಡಳಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿ, ಶಾಲೆ ಪ್ರಗತಿಯತ್ತ ಕೊಂಡೊಯ್ಯಲು ಆಡಳಿತ ಮಂಡಳಿ ಅಗತ್ಯ ಕ್ರಮ ಕೈಗೊಂಡಿರುವದು ಶ್ಲಾಘನೀಯ. ಶಾಲೆ ಇನ್ನಷ್ಟು ಪ್ರಗತಿ ಹೊಂದಲೆಂದರು.
ಕಿತ್ತೂರ ಶಾಸಕ ಬಾಬಾಸಾಹೇಬ ಪಾಟೀಲ ಮಾತನಾಡಿ, ಶಾಲೆಯ ಅಭಿವೃದ್ಧಿ ಮತ್ತು ಸಮಸ್ಯೆಗೆ ಶ್ರಮಿಸುವುದಾಗಿ ತಿಳಿಸಿದರು.
ಮಾಜಿ ಜಿ.ಪಂ ಸದಸ್ಯ ನಿಂಗಪ್ಪ ಅರಕೇರಿ, ಅಬ್ಬಾಸ ಅಲಿ ಪೀರಜಾದೆ,ಎಸ್.ಡಿ.ಕೋಟಗಿ, ಎಂ.ಎ.ಮತ್ತೆ, ಯು.ಬಿ.ಬಾಗೇವಾಡಿ, ಎ.ಎಂ.ಚವಾನ್,ಡಿ.ಎಂ.ಪತ್ತಾರ, ಅಣ್ಣಪ್ಪ ಕಡಕೋಳ, ಪ್ರಕಾಶ ಮುಂಗರವಾಡಿ, ಆಯುಬ ಗಣಾಚಾರಿ, ದಿಲಾವರ ಮತ್ತೆ ಉಪಸ್ಥಿತರಿದ್ದರು.

ಕಂಪ್ಲಿ ಶಾಸಕ ಜೆ.ಎನ್. ಗಣೇಶ್ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಬಳ್ಳಾರಿಯಲ್ಲಿ ಬೃಹತ್ ಪಾದಯಾತ್ರೆ