

23rd May 2026

ಹುಬ್ಬಳ್ಳಿ: ರಾಷ್ಟ್ರೀಯ ಕೋಲಿ ಬೆಸ್ತ ನಿಶಾದ್ ಹಿಂದುಳಿದ ವರ್ಗಗಳ ಮಠಾಧೀಶ್ವರರ ಮಹಾಸಭಾ ನೇತೃತ್ವದಲ್ಲಿ ಶನಿವಾರ ನಗರದ ಖಾಸಗಿ ಹೋಟೆಲ್ ನಲ್ಲಿ ರಾಷ್ಟ್ರೀಯ ವಿಕಾಸಶೀಲ್ ಇನ್ಸಾನ್ ಪಕ್ಷಕ್ಕೆ ಚಾಲನೆ ನೀಡಲಾಯಿತು. ಉತ್ತರ ಕರ್ನಾಟಕದ ಹೆಬ್ಬಾಗಿಲಾದ ಹುಬ್ಬಳ್ಳಿಯಲ್ಲಿ ಪಕ್ಷಕ್ಕೆ ಚಾಲನೆ ನೀಡಲಾಯಿತು.
ರಾಷ್ಟ್ರೀಯ ಸಂಸ್ಥಾಪಕ ಗೌರವ ಅಧ್ಯಕ್ಷ ಮುಖೇಶ ಸಹನಿ ಮಾತನಾಡಿ, ದೇಶದ ಸರ್ವ ಧರ್ಮೀಯರನ್ನು ಒಗ್ಗೂಡಿಸಿ ಕೊಂಡು ರಾಷ್ಟದ ರೈತರು,ಸೈನಿಕರು, ಯುವಜನತೆ, ಮಹಿಳೆಯರು,
ಸಾಮಾಜೀಕ, ಆರ್ಥಿಕ, ಶೈಕ್ಷಣಿಕ ಧಾರ್ಮಿಕ ವಿಜ್ಞಾನ ತಂತ್ರಜ್ಞಾನ ಸೇರಿದ್ದಂತೆ ಸರ್ವತೋಮುಖ ವಾಗಿ ದೇಶ ಪ್ರಗತಿ ಪಥದತ್ತ ಸಾಗಲು ರಾಷ್ಟ್ರೀಯ ವಿಕಾಸಶೀಲ್ ಇನ್ಸಾನ್ ಪಕ್ಷಗೆ ಕರ್ನಾಟಕದ ಮಹಾಜನತೆ ಸಹಕಾರ ನೀಡಬೇಕೆಂದು ಕೋರಿದ್ದರು.
ಪಕ್ಷದ ಅಧ್ಯಕ್ಷ ಸಂತೋಷ ಸಹನಿ ಪಕ್ಷದ ಕುರಿತಾದ ಸಂಕ್ಷಿಪ್ತವಾಗಿ ವಿವರಿಸಿದರು.
ರಾಷ್ಟ್ರೀಯ ಉಪಾಧ್ಯಕ್ಷ ಬಿ.ಕೆ.ಮೋಹನ ಕುಮಾರ ಪಕ್ಷದ ತತ್ವ ಸಿದ್ಧಾಂತ ವಿವರಿಸಿ, ಕರ್ನಾಟಕ ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯತ ಮಟ್ಟದಲ್ಲಿ ಕಾರ್ಯಕರ್ತರು
ಪಕ್ಷವನ್ನು ಬಲಪಡಿಸುವುದರ ಮೂಲಕ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಸಕ್ರಿಯರಾಗಬೇಕೆಂದು ಕರೆ ನೀಡಿದರು.

ಕಂಪ್ಲಿ ಶಾಸಕ ಜೆ.ಎನ್. ಗಣೇಶ್ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಬಳ್ಳಾರಿಯಲ್ಲಿ ಬೃಹತ್ ಪಾದಯಾತ್ರೆ