

11th June 2026

ನೇಸರಗಿ- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ಬೆಳಗಾವಿ 1 ಜಿಲ್ಲೆಯ ಬೈಲಹೊಂಗಲ ಯೋಜನಾ ಕಚೇರಿ ವ್ಯಾಪ್ತಿಯ ಬೈಲಹೊಂಗಲ ವಲಯ ಮೇಕಲ ಮರಡಿ ಕಾರ್ಯಕ್ಷೇತ್ರದ ಶ್ರೀ ಬನಶಂಕರಿ ಜ್ಞಾನವಿಕಾಸ ಕೇಂದ್ರದಲ್ಲಿ ಮತ್ತು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಎಸ್ ಡಿ ಎಂ ನಾರಾಯಣ ಹೃದಯಾಲಯ ಆಸ್ಪತ್ರೆ ಧಾರವಾಡ ಶ್ರೀ ಸಾಯಿ ದೀಪ ಕಣ್ಣಿನ ಆಸ್ಪತ್ರೆ ಶ್ರೀ ಆರ್ತೋ ಆಸ್ಪತ್ರೆ ಬೆಳಗಾವಿ ಈವರ ಸಹಯೋಗದಲ್ಲಿ ಉಚಿತ ಹೃದಯ ತಪಾಸಣೆ ,ಕಣ್ಣಿನ ತಪಾಸಣೆ ಮತ್ತು ಎಲಬು ಕೀಲು . ಬಿಪಿ ಶುಗರ್ ತಪಾಸಣೆ ಶಿಬಿರವನ್ನು ಶ್ರೀ ಮೂಗ ಬಸವೇಶ್ವರ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ನಿಂಗಪ್ಪ ಅರಿಕೇರಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಗೌಡಪ್ಪ ಯರಡಾಲ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಚಂದ್ರಯ್ಯ ಹಿರೇಮಠ, ನಿಂಗಪ್ಪ ಕುರುಗುಂದ ಪಿ ಕೆ ಪಿ ಎಸ್ ಸದಸ್ಯರು, ತಾಲೂಕಿನ ಜ್ಞಾನವಿಕಾಸ ಸಮನ್ವೇಧಿಕಾರಿ ಶೈಲಾ , ಡಾ. ಪ್ರಕಾಶ್ ವೈದ್ಯರು, ಎಸ್ ಡಿ ಎಂ ನಾರಾಯಣ ಹೃದಯಾಲಯ ,ಧಾರವಾಡ, ಶ್ರೀ ಸಾಯಿ ದೀಪ ಕಣ್ಣಿನ ಅಸ್ಪತ್ರೆ ಬೆಳಗಾವಿ ,ಶ್ರೀ ಆರ್ತೋ ಆಸ್ಪತ್ರೆ ಬೆಳಗಾವಿ ಸಿಬ್ಬಂದಿಗಳು ಇವರ ಸಮ್ಮುಖದಲ್ಲಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಶುಭ ಚಾಲನೆ ನೀಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿ ಗಳಾದ ನಿಂಗಪ್ಪ ಅರಿಕೇರಿ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಾಡದಿರುವ ಕಾರ್ಯಗಳ ಬಗ್ಗೆ ಹಾಗೂ ಅದರ ಸದುಪಯೋಗ ಬಗ್ಗೆ, ಆರೋಗ್ಯ ತಪಾಸಣೆ ಶಿಬಿರಗಳು ಇಂತಹ ಹತ್ತಾರು ಕಾರ್ಯಕ್ರಮಗಳನ್ನು ಕೈಗೊಂಡಿದೆ, ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಅವರು ಬಡವರಿಗೆಂದೇ ಇಂತಹ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು ಕಾರ್ಯಕ್ರಮಗಳ ಉಪಯೋಗ ಎಲ್ಲರೂ ಪಡೆದುಕೊಳ್ಳಬೇಕು. ಮಹಿಳೆಯರು ಆರ್ಥಿಕವಾಗಿ ಸಬಲೀಕರಣ ಹೊಂದುದರೊಂದಿಗೆ ಕುಟುಂಬ ನಿರ್ವಹಣೆಯನ್ನು ಜಾಣ್ಮೆಯಿಂದ ನಿರ್ವಹಿಸುವುದು ಅಗತ್ಯವಾಗಿದೆ. ಹಾಗೂ ಎಲ್ಲರೂ ಅನಾವಶ್ಯಕ ಖರ್ಚು ಮಾಡದೆ ಸ್ವ ಉದ್ಯೋಗ ರೂಪಿಸಿಕೊಂಡು ಸ್ವಾವಲಂಬಿಯಾಗಿ ಜೀವನ ನಡೆಸಿ,ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಇಡೀ ಕರ್ನಾಟಕದಾದ್ಯಂತ ವ್ಯಾಪಿಸಿದ್ದು ಅದೆಷ್ಟೋ ಕುಟುಂಗಳಿಗೆ ದಾರಿದೀಪವಾಗಿದೆ.ತಮ್ಮ ಅವಶ್ಯಕತೆಗೆ ಪೂರಕವಾಗಿ ಸಾಲ ಸೌಲಭ್ಯಗಳನ್ನು ಪಡೆದು ಅಭಿವೃದ್ಧಿ ಹೊಂದಬೇಕು ಎಂದು ತಿಳಿಸಿದರು.
ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ ಶೈಲಾ ಮಾತನಾಡಿ,ಧರ್ಮಸ್ಥಳ ಯೋಜನೆ ಕಾರ್ಯಕ್ರಮಗಳ ಬಗ್ಗೆ ಸಮುದಾಯ ಅಭಿವೃದ್ಧಿ ಮಾಶಾಸನ ವಾತ್ಸಲ್ಯ, ಸುಜ್ಞಾನಿಧಿ ಶಿಷ್ಯವೇತನ ಜಲಮಂಗಳ ಆರೋಗ್ಯ ರಕ್ಷಾ ಸಂಪೂರ್ಣ ಸುರಕ್ಷಾ ಆರೋಗ್ಯ ವಿಮೆ ಬಗ್ಗೆ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ 200 ಗ್ರಾಮದ ಜನರು ಬಂದು ಈ ಉಚಿತ ತಪಾಸಣೆಯಲ್ಲಿ ಹೃದಯ ಸಂಬಂಧಿತ ಕಾಯಿಲೆಗಳ ಪರೀಕ್ಷೆ ಮತ್ತು ಕಣ್ಣಿನ ತಪಾಸಣೆ , ಬಿ ಪಿ ಶುಗರ್ ಮತ್ತು ಎಲಬು ಕೀಲು ತಪಾಸಣೆ ಮಾಡಿಸಲಾಯಿತು. ಜ್ಞಾನವಿಕಾಸ ಸಮನ್ವಯಾಧಿಕಾರಿ,ಶೈಲಾ ನಿರೂಪಿಸಿದರು. ಪದ್ಮ ಕಡಟ್ಟಿ ಸ್ವಾಗತಿಸಿದರು. ಪ್ರತಿನಿಧಿ ಶೀಲಾ ಕಡಟ್ಟಿ ವಂದಿಸಿದರು.,ಒಕ್ಕೂಟ ಅಧ್ಯಕ್ಷರು ,ಜ್ಞಾನ ವಿಕಾಸ ಕೇಂದ್ರದ ಅಧ್ಯಕ್ಷರು ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ನೇಸರಗಿ- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ಬೆಳಗಾವಿ 1 ಜಿಲ್ಲೆಯ ಬೈಲಹೊಂಗಲ ಯೋಜನಾ ಕಚೇರಿ ವ್ಯಾಪ್ತಿಯ ಬೈಲಹೊಂಗಲ ವಲಯ ಮೇಕಲ ಮರಡಿ ಕಾರ್ಯಕ್ಷೇತ್ರದ ಶ್ರೀ ಬನಶಂಕರಿ ಜ್ಞಾನವಿಕಾಸ ಕೇಂದ್ರದಲ್ಲಿ ಮತ್ತು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಎಸ್ ಡಿ ಎಂ ನಾರಾಯಣ ಹೃದಯಾಲಯ ಆಸ್ಪತ್ರೆ ಧಾರವಾಡ ಶ್ರೀ ಸಾಯಿ ದೀಪ ಕಣ್ಣಿನ ಆಸ್ಪತ್ರೆ ಶ್ರೀ ಆರ್ತೋ ಆಸ್ಪತ್ರೆ ಬೆಳಗಾವಿ ಈವರ ಸಹಯೋಗದಲ್ಲಿ ಉಚಿತ ಹೃದಯ ತಪಾಸಣೆ ,ಕಣ್ಣಿನ ತಪಾಸಣೆ ಮತ್ತು ಎಲಬು ಕೀಲು . ಬಿಪಿ ಶುಗರ್ ತಪಾಸಣೆ ಶಿಬಿರವನ್ನು ಶ್ರೀ ಮೂಗ ಬಸವೇಶ್ವರ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ನಿಂಗಪ್ಪ ಅರಿಕೇರಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಗೌಡಪ್ಪ ಯರಡಾಲ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಚಂದ್ರಯ್ಯ ಹಿರೇಮಠ, ನಿಂಗಪ್ಪ ಕುರುಗುಂದ ಪಿ ಕೆ ಪಿ ಎಸ್ ಸದಸ್ಯರು, ತಾಲೂಕಿನ ಜ್ಞಾನವಿಕಾಸ ಸಮನ್ವೇಧಿಕಾರಿ ಶೈಲಾ , ಡಾ. ಪ್ರಕಾಶ್ ವೈದ್ಯರು, ಎಸ್ ಡಿ ಎಂ ನಾರಾಯಣ ಹೃದಯಾಲಯ ,ಧಾರವಾಡ, ಶ್ರೀ ಸಾಯಿ ದೀಪ ಕಣ್ಣಿನ ಅಸ್ಪತ್ರೆ ಬೆಳಗಾವಿ ,ಶ್ರೀ ಆರ್ತೋ ಆಸ್ಪತ್ರೆ ಬೆಳಗಾವಿ ಸಿಬ್ಬಂದಿಗಳು ಇವರ ಸಮ್ಮುಖದಲ್ಲಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಶುಭ ಚಾಲನೆ ನೀಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿ ಗಳಾದ ನಿಂಗಪ್ಪ ಅರಿಕೇರಿ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಾಡದಿರುವ ಕಾರ್ಯಗಳ ಬಗ್ಗೆ ಹಾಗೂ ಅದರ ಸದುಪಯೋಗ ಬಗ್ಗೆ, ಆರೋಗ್ಯ ತಪಾಸಣೆ ಶಿಬಿರಗಳು ಇಂತಹ ಹತ್ತಾರು ಕಾರ್ಯಕ್ರಮಗಳನ್ನು ಕೈಗೊಂಡಿದೆ, ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಅವರು ಬಡವರಿಗೆಂದೇ ಇಂತಹ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು ಕಾರ್ಯಕ್ರಮಗಳ ಉಪಯೋಗ ಎಲ್ಲರೂ ಪಡೆದುಕೊಳ್ಳಬೇಕು. ಮಹಿಳೆಯರು ಆರ್ಥಿಕವಾಗಿ ಸಬಲೀಕರಣ ಹೊಂದುದರೊಂದಿಗೆ ಕುಟುಂಬ ನಿರ್ವಹಣೆಯನ್ನು ಜಾಣ್ಮೆಯಿಂದ ನಿರ್ವಹಿಸುವುದು ಅಗತ್ಯವಾಗಿದೆ. ಹಾಗೂ ಎಲ್ಲರೂ ಅನಾವಶ್ಯಕ ಖರ್ಚು ಮಾಡದೆ ಸ್ವ ಉದ್ಯೋಗ ರೂಪಿಸಿಕೊಂಡು ಸ್ವಾವಲಂಬಿಯಾಗಿ ಜೀವನ ನಡೆಸಿ,ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಇಡೀ ಕರ್ನಾಟಕದಾದ್ಯಂತ ವ್ಯಾಪಿಸಿದ್ದು ಅದೆಷ್ಟೋ ಕುಟುಂಗಳಿಗೆ ದಾರಿದೀಪವಾಗಿದೆ.ತಮ್ಮ ಅವಶ್ಯಕತೆಗೆ ಪೂರಕವಾಗಿ ಸಾಲ ಸೌಲಭ್ಯಗಳನ್ನು ಪಡೆದು ಅಭಿವೃದ್ಧಿ ಹೊಂದಬೇಕು ಎಂದು ತಿಳಿಸಿದರು.
ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ ಶೈಲಾ ಮಾತನಾಡಿ,ಧರ್ಮಸ್ಥಳ ಯೋಜನೆ ಕಾರ್ಯಕ್ರಮಗಳ ಬಗ್ಗೆ ಸಮುದಾಯ ಅಭಿವೃದ್ಧಿ ಮಾಶಾಸನ ವಾತ್ಸಲ್ಯ, ಸುಜ್ಞಾನಿಧಿ ಶಿಷ್ಯವೇತನ ಜಲಮಂಗಳ ಆರೋಗ್ಯ ರಕ್ಷಾ ಸಂಪೂರ್ಣ ಸುರಕ್ಷಾ ಆರೋಗ್ಯ ವಿಮೆ ಬಗ್ಗೆ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ 200 ಗ್ರಾಮದ ಜನರು ಬಂದು ಈ ಉಚಿತ ತಪಾಸಣೆಯಲ್ಲಿ ಹೃದಯ ಸಂಬಂಧಿತ ಕಾಯಿಲೆಗಳ ಪರೀಕ್ಷೆ ಮತ್ತು ಕಣ್ಣಿನ ತಪಾಸಣೆ , ಬಿ ಪಿ ಶುಗರ್ ಮತ್ತು ಎಲಬು ಕೀಲು ತಪಾಸಣೆ ಮಾಡಿಸಲಾಯಿತು. ಜ್ಞಾನವಿಕಾಸ ಸಮನ್ವಯಾಧಿಕಾರಿ,ಶೈಲಾ ನಿರೂಪಿಸಿದರು. ಪದ್ಮ ಕಡಟ್ಟಿ ಸ್ವಾಗತಿಸಿದರು. ಪ್ರತಿನಿಧಿ ಶೀಲಾ ಕಡಟ್ಟಿ ವಂದಿಸಿದರು.,ಒಕ್ಕೂಟ ಅಧ್ಯಕ್ಷರು ,ಜ್ಞಾನ ವಿಕಾಸ ಕೇಂದ್ರದ ಅಧ್ಯಕ್ಷರು ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಬರೀ ಪದವಿ ಸಾಲದು, ಪ್ರಾಯೋಗಿಕ ಕೌಶಲ್ಯ ಬೆಳೆಸಿಕೊಂಡು ಸ್ವಾವಲಂಬಿಗಳಾಗಿ: ಯುವ ಇಂಜಿನಿಯರ್ಗಳಿಗೆ ಪತ್ರಕರ್ತ ಅಜಿತ್ ಹನಮಕ್ಕನವರ ಕರೆ