21st October 2024

ರಾಷ್ಟ್ರ ಮಟ್ಟದ ಟೆನಿಸ್ ಕ್ರಿಕೆಟ್ ನಲ್ಲಿ ಚಿನ್ನದ ಪದಕ ಪಡೆದ ಆಶಾ ಮಂಗೋಜಿ
ಅಂಕಲಗಿ. ೨೧- ಹಿಮಾಚಲ ಪ್ರದೇಶದ ಕುಲು ಜಿಲ್ಲೆಯ ಢಾಲಪುರ ನಲ್ಲಿ ಇತ್ತೀಚೆಗೆ ಜರುಗಿದ ಪ್ರಥಮ ಮಹಿಳಾ ರಾಷ್ಟ್ರೀಯ ಟಿ- ೧೦ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕರ್ನಾಟಕ ಪ್ರತಿನಿಧಿಸಿ ಪಾಲ್ಗೊಂಡಿದ್ದ ಸಮೀಪದ ಈರನಟ್ಟಿ ಗ್ರಾಮದ ಆಶಾ ಬಸಪ್ಪಾ ಮಂಗೋಜಿ ತೃತೀಯ ಸ್ಥಾನಗಿಟ್ಟಿಸಿ, ಚಿನ್ನದ ಪದಕ ಪಡೆದುಕೊಂಡು, ರಾಜ್ಯ, ಜಿಲ್ಲೆ ಸೇರಿದಂತೆ ಗ್ರಾಮಕ್ಕೆ ಕೀರ್ತಿ ತಂದಿದ್ದಾಳೆ. ಇವಳ ಈ ಸಾಧನೆಗೆ ನಾಡಿನ ಕ್ರಿಕೆಟ್ ಪ್ರೇಮಿಗಳಲ್ಲಿ ಮತ್ತು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ. ಕೃಷಿಕ ಕುಟುಂಬದಿಂದ ಬಂದ ಆಶಾ ಬಿ.ಎಸ್ಸಿ ಪದವಿ ಪಡೆದು, ಬೆಂಗಳೂರಿನ ಸೀನ ಸ್ಪೋರ್ಟ್ಸ್ ಕ್ರಿಕೆಟ್ ಅಕಾಡೆಮಿ ಯಲ್ಲಿ ತರಬೇತಿ ಪಡೆದಿದ್ದು, ಟೆನಿಸ್ ಕ್ರಿಕೆಟ್ ನಲ್ಲಿ ಸತತ ಅಧ್ಯಯನ ಆಸಕ್ತಿ ಮತ್ತು ಕ್ರಿಯಾಶೀಲತ್ವ ವಹಿಸಿಕೊಂಡಿರುವ ಇವಳು ಅಂತರಾಷ್ಟ್ರೀಯ ಮಟ್ಟದಲ್ಲಿ ಮೇರು ಸಾಧನೆ ತನ್ನದಾಗಬೇಕೆಂಬ ಮನದ ಇಂಗಿತ ವ್ಯಕ್ತಪಡಿಸಿದ್ದಾಳೆ.
ಆಶಾ ಮದವಾಲ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆಯಾದ ಕಮಲಾಕ್ಷಿ ಬಸಪ್ಪಾ ಮಂಗೋಜಿ ಅವರ ಸುಪುತ್ರಿಯಾಗಿದ್ದಾಳೆ.
ಸುರೇಶ ಉರಬಿನಹಟ್ಟಿ

ಬೈಲಹೊಂಗಲ: ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ರಾಜಕೀಯ ಜಿದ್ದಾಜಿದ್ದಿನ ಶಕ್ತಿ ಪ್ರದರ್ಶನದಿಂದ ಇಡೀ ರಾಜಧಾನಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಸೃಷ್ಟಿಯಾಗಿ ಕಡುಬಡತನದಲ್ಲೂ ವರ್ಷವಿಡೀ ಕಷ್ಟಪಟ್ಟು ಓದಿದ ಹತ್ತಾರು ಬಡ ವಿದ್ಯಾರ್ಥಿನಿಯರು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರ ತಲುಪಲಾಗದೆ, ಕೊನೆ ಕ್ಷಣದಲ್ಲಿ ನೀಟ್ (NEET) ಮರುಪರೀಕ್ಷೆ ಬರೆಯುವ ಮಹತ್ವದ ಅವಕಾಶವನ್ನು ಕಳೆದುಕೊಂಡು ಪರೀಕ್ಷಾ ಕೇಂದ್ರಗಳ ಮುಂದೆ ಕಣ್ಣೀರು ಹಾಕುತ್ತಿರುವುದು ಅತ್ಯಂತ ಖಂಡನೀಯ, ಈ ವಿದ್ಯಾರ್ಥಿಗಳ ಮರಗು ಕಾಂಗ್ರೆಸ್ ಪಕ್ಷಕ್ಕೆ ತಟ್ಟಲಿದೆ ಎಂದು ಬಿಜೆಪಿ ರಾಜ್ಯ ಸಮಿತಿ ಸದಸ್ಯ ಎಫ್.ಎಸ್.ಸಿದ್ದನಗೌಡರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಣ್ಣಿಕೇರಿ ಶಾಲೆಯಲ್ಲಿ 12 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಮಕ್ಕಳಿಂದ ವಿವಿಧ ಯೋಗಾಸನಗಳು ಪ್ರದರ್ಶನ

ನಾಳೆ ಪಿ. ಎನ್. ಗಾಡ್ಗಿಲ್ & ಸನ್ಸ್ ವತಿಯಿಂದ ಚಿತ್ರಕಲ ಸ್ಪರ್ಧೆ ಚಿರಂಜೀವಿ ಮೆಥೋಡಿಸ್ಟ ಆಂಗ್ಲ ಕನ್ನಡ ಮಾಧ್ಯಮ ಪ್ರೌಢ ಶಾಲೆ ಯಾದಗಿರಿ