31st March 2025

ಅಲ್ಲಮಪ್ರಭುದೇವರ ಜಯಂತಿ ಆಚರಣೆ ಬೆಳಗಾವಿ 30.03.2025ರಂದು ವಚನ ಪಿತಾಮಹ ಡಾ.ಫ. ಗು.ಹಳಕಟ್ಟಿಭವನ ಲಿಂಗಾಯಿತ ಸಂಘಟನೆ ಮಹಾ೦ತೇಶ ನಗರ ಬೆಳಗಾವಿಯಲ್ಲಿಜರುಗಿತು.ಮಹಾದೇವಿ ಅರಳಿ ಸಾಮೂಹಿಕ ಪ್ರಾರ್ಥನೆ ನಡೆಸಿಕೊಟ್ಟರು. ಬಸವರಾಜ ಬಿಜ್ಜರಗಿ ಆನಂದ ಕಕಿ೯, ಶಾಂತಾ ತಿಗಡಿ, ಸುನೀಲ ಸಾಣಿಕೊಪ್ಪ,ಸುಜಾತಾ ಮತ್ತಿಕಟ್ಟಿ, ಶ್ರೀದೇವಿ ನರಗುಂದ, ಬಸವರಾಜ ಗುರುನ ಗೌಡ, ಬಿ. ಪಿ. ಜೇವನಿ,ಪವಿತ್ರಾ ನರಗುಂದ,ಹಾಗೂ ಶರಣ ಶರಣೆಯರು ವಚನ ವಿಶ್ಲೇಶಣೆ ಮಾಡಿದರು. ಭಾರತೀಯ ನೂತನ ವರ್ಷ ಆರಂಭ ದಿನ ಇಂದು,ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪ ಶೂನ್ಯಸಿಂಹಾಸನದ ಪ್ರಥಮ ಅಧ್ಯಕ್ಷ ಅಲ್ಲಮಪ್ರಭು ಪ್ರಭು ದೇವರು, ಅವರು ಅತಿ ಎತ್ತರದ ಸ್ಥಾನದಲ್ಲಿದ್ದರು. ಹೆಣ್ಣಿಗಾಗಿ ಸತ್ತವರು ಕೋಟಿ ಜನ ,ಮಣ್ಣಿಗಾಗಿ ಸತ್ತವರು ಕೋಟಿ ಜನ ,ಗುಹೆಶ್ವರ ನಿನಗಾಗಿ ಸತ್ತವರು ಯಾರೋ ಕಾಣೆ ಎಂದಿದ್ದಾರೆ ಅಲ್ಲಮಪ್ರಭು ಪ್ರಭುದೇವರು.ಜೀವಂತ ಇದ್ದಾಗ ಎಲ್ಲರನ್ನ ಸಮಾನವಾಗಿ ಕಾಣಿರಿ ಕೊಡುವ ಕೈ ಮೇಲೆ ಇರಲಿ, ದೇವರು ಗಾಳಿಯಂತೆ ಎಲ್ಲ ಕಡೆ ಇದ್ದಾನೆ. ಶರಣ ಮಹಾಂತೇಶ ಇಂಚಲ ಮಾತನಾಡಿದರು. ನೇತ್ರಾವತಿ ಕೆಂಪಣ್ಣ ರಾಮಾಪುರೆ,ದಾಸೋಹ ಸೇವೆಗೈದರು.ಮಹಾಂತೇಶ ಮೆಣಸಿನಕಾಯಿ, ಸಂಗಮೇಶ ಅರಳಿ ನಿರೂಪಿಸಿದರು. ಬಸವರಾಜ ಮತ್ತಿಕಟ್ಟಿ,ಶೇಖರ ವಾಲಿಇಟಿಗಿ,ಶಿವಾನಂದ ನಾಯಕ,ಬಾಬಣ್ಣ ತಿಗಡಿ, ಲಕ್ಷ್ಮಣ ಕು೦ಬಾರ, ಗಂಗಪ್ಪ ಉಣಕಲ್, ಕೆಂಪಣ್ಣ ರಾಮಪೊರೆ ಇತರ ಶರಣ ಶರಣೆಯರು ಉಪಸ್ಥಿತರಿದ್ದರು. ಸುರೇಶ ನರಗುಂದ ವಂದಿಸಿದರು

ಪ್ರಧಾನ ಜಿಲ್ಲಾ ನ್ಯಾಯಾಧೀಶ ಸಿ.ಚಂದ್ರಶೇಖರ ವರ್ಗಾವಣೆ- ಕೊಪ್ಪಳ ನ್ಯಾಯಾಲಯಕ್ಕೆ ಲತಾಕುಮಾರಿ.ಎಂ ನಿಯೋಜನೆ

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ