
23rd June 2025
ಯಾದಗಿರಿ: ಕೇಂದ್ರ ಸರಕಾರ ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ಧ್ವೇಷದ ರಾಜಕೀಯ ಮಾಡುತ್ತಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ. ಭೀಮಣ್ಣ ಮೇಟಿ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ನಾಡಿನ ಅಭಿವೃದ್ಧಿಗಾಗಿ ಸಚಿವರು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಇದನ್ನು ಸಹಿಸಿಕೊಳ್ಳಲು ಕೇಂದ್ರ ಸರಕಾರಕ್ಕೆ ಆಗುತ್ತಿಲ್ಲ. ಹೀಗಾಗಿಯೇ ಅವರ ವಿರುದ್ಧ ಪಿತೂರಿ ರಾಜಕೀಯ ಮಾಡುವ ಮೂಲಕ ಸಣ್ಣತನ ಪ್ರದರ್ಶನ ಮಾಡುತ್ತಿರುವುದು ನಾಚಿಗೇಡು ಸಂಗತಿಯಾಗಿದೆ ಎಂದು ಹೇಳಿದರು.
ಅಮೆರಿಕಾ ಪ್ರವಾಸಕ್ಕೆ ಸಚಿವರು ಹೋಗಬೇಕಿತ್ತು. ಎರಡು ದಿನಗಳ ಕಾಲ ತಂತ್ರಜ್ಞಾನ ಶೃಂಗ ಸಭೆಯಲ್ಲಿ ಸರಕಾರದ ಪ್ರತಿನಿಧಿಯಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಭಾಗಿಯಾಗಬೇಕಿತ್ತು. ಆದರೆ ಇದರಲ್ಲಿಯೂ ಧ್ವೇಷದ ರಾಜಕೀಯ ಮಾಡಿದ ಪರಿಣಾಮವಾಗಿ ಸಚಿವರು ಅಮೆರಿಕಾಕ್ಕೆ ಹೋಗಲು ಆಗಲಿಲ್ಲ. ನಾಡಿಗೆ ಕೇಂದ್ರ ಸರಕಾರ ಅವಮಾನ ಮಾಡಿದೆ ಎಂದು ದೂರಿದರು.
ರಾಜ್ಯಕ್ಕೆ ಬಂಡವಾಳ ಆಕರ್ಷಣೆ , ಸಹಯೋಗ ಕುರಿತು ಸಾಧ್ಯೆಗಳ ಪರಿಶೀಲನೆ ನಡೆಸುವುದು ಸಚಿವರ ಪ್ರವಾಸದ ಗುರಿಯಾಗಿತ್ತು. ರಾಜ್ಯದ ಅಭಿವೃದ್ಧಿಗೆ ಕೇಂದ್ರ ಸರಕಾರವೇ ಸಂಪೂರ್ಣವಾಗಿ ಅಡ್ಡಗಾಲು ಆಗಿದೆ. ಮುಂದಿನ ದಿನಗಳಲ್ಲಿ ಜನರು ತಕ್ಕಪಾಠ ಕಲಿಸಲಿದ್ದಾರೆ ಎಂದು ಹೇಳಿದರು.
ಕೇಂದ್ರ ಸರಕಾರ ಅಧಿಕಾರವನ್ನು ಸಂಪೂರ್ಣವಾಗಿ ದುರ್ಬಳಕೆ ಮಾಡಿಕೊಳ್ಳುವ ಮೂಲಕ ಸಂವಿಧಾನದ ಆಶಯಗಳಿಗೆ ಕೊಡಲಿ ಪೆಟ್ಟು ನೀಡುತ್ತಿದೆ. ಅಂಬೇಡ್ಕರ್ ವಾದಿಗಳಿಗೆ ಅನ್ಯಾಯ ಮಾಡಿದೆ. ಇದರಲ್ಲಿಯೂ ಮನುವಾದ ಹುಡುಕುವ ಕೆಲಸ ನಡೆಯುತ್ತಿದೆ ಎಂದು ತಿಳಿಸಿದರು.
ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಅಭಿವೃದ್ಧಿಗೆ ₹50 ಕೋಟಿ ಅನುದಾನ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ 83ನೇ ಹುಟ್ಟುಹಬ್ಬ ಆಚರಣೆ-ಬೋಯಪಾಟಿ ವಿಷ್ಣುವರ್ಧನ್
ಕಾಂಗ್ರೆಸ್ ಸರ್ಕಾರದ ಸಾಧನ ಸಮಾವೇಶ ಯಾವ ಪುರುಷಾರ್ಥಕ್ಕೆ?? 3400 ರೈತರು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ, ಪರಿಹಾರ ಕೊಡಿ ಮೊದಲು. ಕೃಷಿ ಸಚಿವ ರಾಜೀನಾಮೆ ಕೊಡಲಿ-ಶ್ರೀರಾಮುಲು