ಯಾದಗಿರಿ: ಸುರಪುರ ತಾಲೂಕಿನಾದ್ಯಾಂತ ಕೆಲ ಅನಧಿಕೃತ ವಸತಿ ಸಹಿತ ಶಾಲೆಗಳ ಮಾನ್ಯತೆ ರದ್ದು ಪಡಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ಜನಪರ ವೇದಿಕೆ ಹುಣಸಗಿ ತಾಲೂಕು ಅಧ್ಯಕ್ಷ ಪ್ರಭುಗೌಡ ಪೋತ ರೆಡ್ಡಿ ನೇತೃತ್ವದಲ್ಲಿ ಇಂದು ಜಿಲ್ಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿ ಮಾತನಾಡಿದ ಅವರು ತಾಲೂಕಿನಲ್ಲಿ ಬಹುತೇಕ ಖಾಸಗಿ ಶಾಲೆಗಳು ಯಾವುದೇ ಅನುಮತಿ ಪಡೆಯದೆ ವಸತಿ ಸಹಿತ ಶಾಲೆಗಳು ನಡೆಸುತ್ತಿದ್ದು ಇದು ಕಾನೂನು ಬಾಹಿರವಾಗಿದೆ ಪಾಲಕರಿಂದ ಅತಿ ಹೆಚ್ಚು ಹಣ ಪಡೆದು ಅಲ್ಲಿಯ ಮಕ್ಕಳಿಗೆ ಯಾವುದೇ ರೀತಿಯ ಸರಿಯಾದ ಸೌಲಭ್ಯ ಒದಗಿಸದೆ ಶಾಲೆಗಳನ್ನು ನಡೆಸುತ್ತಿದ್ದಾರೆ.
ಈ ಕುರಿತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಖಾಸಗಿ ಅನುದಾನ ರಹಿತ ಶಾಲೆಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿ ತಪ್ಪಿಸ್ತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಜಯ ಕರ್ನಾಟಕ ಜನಪರ ವೇದಿಕೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರುದ್ರಾಂಬಿಕ. ಆರ್.ಪಾಟೀಲ್ ಚಟ್ನಳ್ಳಿ, ಪರಶುರಾಮ್, ಆಕಾಶ್ ಖಾನಾಪುರ, ಹಾಗೂ ಇನ್ನಿತರರು ಉಪಸ್ಥಿತರಿದ್ದರು.







