

27th February 2026

ಗದಗ, 27. ಜಿಲ್ಲೆಯ ಗದಗ ತಾಲೂಕಿನ ಹೊಂಬಳ ವಲಯದ ಹುಯಿಲಗೋಳ ಕಾರ್ಯಕ್ಷೇತ್ರದಲ್ಲಿ ಮಾಶಾಸನ ಪಡೆಯುತ್ತಿದ್ದ ಹುಸೇನಮ್ಮ ಅವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಮನೆ ನಿರ್ಮಿಸಿ ಶನಿವಾರ ಜಿಲ್ಲಾ ನಿರ್ದೇಶಕರಾದ ಕೇಶವ ದೇವಾಂಗ ಅವರು ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ತಾಲ್ಲೂಕಾ ಯೋಜನಾಧಿಕಾರಿಗಳಾದ ಉಮಾ ಮತ್ತು ಕೊಪ್ಪಳ ಪ್ರಾದೇಶಿಕ ವಿಭಾಗದ ಜ್ಞಾನವಿಕಾಸ ಯೋಜನಾಧಿಕಾರಿಗಳಾದ ಸುಧಾ ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಊರಿನ ಗಣ್ಯರು ಮತ್ತು ನವಜೀವನ ಸಮಿತಿಯ ಸದಸ್ಯರು, ವಲಯದ ಮೇಲ್ವಿಚಾರಕರು, ಜ್ಞಾನವಿಕಾಸ ಸಮನ್ವಯ ಅಧಿಕಾರಿ ಸೇವಾ ಪ್ರತಿನಿಧಿಗಳು ಒಕ್ಕೂಟದವರು ಉಪಸ್ಥಿತರಿದ್ದರು.

ಪ್ರಧಾನ ಜಿಲ್ಲಾ ನ್ಯಾಯಾಧೀಶ ಸಿ.ಚಂದ್ರಶೇಖರ ವರ್ಗಾವಣೆ- ಕೊಪ್ಪಳ ನ್ಯಾಯಾಲಯಕ್ಕೆ ಲತಾಕುಮಾರಿ.ಎಂ ನಿಯೋಜನೆ

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ